May 14, 2024

MALNAD TV

HEART OF COFFEE CITY

ಕೇಸರಿ ಫ್ಲೆಕ್ಸ್ ವಿವಾದ, ಎರಡು ಗಂಪುಗಳ ಘರ್ಷಣೆ, ದೂರು-ಪ್ರತಿದೂರು ದಾಖಲು

1 min read

 

 

ಮಸೀದಿ ಮುಂಭಾಗ ಕೇಸರಿ ಬಾವುಟ ಕಟ್ಟಿದ್ದಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ವೆಲ್‍ಕಂ ಗೇಟ್ ಬಳಿ ಇರುವ ಮಸೀದಿ ಮುಂಭಾಗ ಜಿಲ್ಲೆಯಲ್ಲಿ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಕೇಸರಿ ಬಾವುಟ ಹಾಗೂ ಬಂಟಿಂಗ್ಸ್‍ಗಳನ್ನ ಕಟ್ಟಿದ್ದರು. ಈ ವಿಚಾರವಾಗಿ ಶ್ರೀರಾಮಸೇನೆ ಮುಖಂಡ ಅರ್ಜುನ್ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ರಫೀಕ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರೂ ಕೈ-ಕೈ ಮಿಲಾಯಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಶ್ರೀ ರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಶೃಂಗೇರಿಯಲ್ಲೂ ಶ್ರೀ ರಾಮಸೇನೆ ಕಾರ್ಯಕರ್ತರು ಮಾಲೆ ಧರಿಸಿದ್ದು ಶೃಂಗೇರಿ ಪಟ್ಟಣದಾದ್ಯಂತ ಕೇಸರಿ ಬಾವುಟ-ಬಂಟಿಗ್ಸ್ ಕಟ್ಟಿದ್ದರು. ಈ ಹಿಂದೆ ನಡೆದಿದ್ದ ಕಾಂಗ್ರೆಸ್ ರ್ಯಾಲಿ ವೇಳೆಯಲ್ಲಿ ಅದೇ ಜಾಗದಲ್ಲಿ ಫ್ಲೆಕ್ಸ್ ಹಾಗೂ ಬಾವುಟಗಳನ್ನ ಹಾಕಲು ಅನುಮತಿ ನೀಡಲಾಗಿತ್ತು. ಆದರೆ, ಈಗ ಕೇಸರಿ ಬಾವುಟಗಳನ್ನ ತೆರವು ಮಾಡಿಸಿರುವುದು ಸರಿಯಲ್ಲ ಎಂಬುದು ಹಿಂದೂ ಸಂಘಟನೆಗಳು ಪಟ್ಟಣ ಪಂಚಾಯಿತಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಗಲಾಟೆಯ ಬಳಿಕ ಇಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು, ಶೃಂಗೇರಿ ಪೆÇಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ. ಸ್ಥಳಕ್ಕೆ ಎಎಸ್ಪಿ ಗುಂಜನ್ ಆರ್ಯ ಭೇಟಿ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!