May 3, 2024

MALNAD TV

HEART OF COFFEE CITY

ಸಾಹಿತ್ಯ ಸಿರಿ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಇಬ್ಬರು ಸಾಧಕರು

1 min read

 

ಚಿಕ್ಕಮಗಳೂರು : ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ಸಾಹಿತಿಗಳು ಸಾಹಿತ್ಯ ಸಿರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಚಿತ್ರದುರ್ಗ ಮತ್ತು ಚಿಕ್ಕಮಗಳೂರಿನ ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ೨೦೨೩ ಡಿಸೆಂಬರ್ ೩೦-೩೧ ರಂದು ನಡೆಯಬೇಕಿತ್ತು. ಕಾರಣಾಂತರಗಳಿಂದ ಅದನ್ನು ಮುಂದೂಡಲಾಗಿತ್ತು. ಸಮಿತಿಯ ಪದಾಧಿಕಾರಿಗಳು ಚರ್ಚಿಸಿ ೨೦೨೪ ಫೆಬ್ರವರಿ ೨ರ ಶುಕ್ರವಾರ ಮತ್ತು ೩ ಶನಿವಾರ ನಡೆಸಲು ನಿರ್ಣಯಿಸಲಾಯಿತು.
ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿ ನಡೆಯಲು ಭರದ ಸಿದ್ಧತೆಯು ನಡೆಯುತ್ತಿದ್ದು, ಫೆಬ್ರವರಿ ೨ ರ ಬೆಳಗ್ಗೆ ೯ ಗಂಟೆಯಿಂದ ಪ್ರಾರಂಭವಾಗುವ ಸಮ್ಮೇಳನವು ೩ ರ ರಾತ್ರಿ ೯ ರವರೆಗೆ ನಿರಂತರವಾಗಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿವೆ.

 


ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಸಾಹಿತ್ಯ ಸಿರಿ ಪ್ರಶಸ್ತಿಗೆ ಚಿಕ್ಕಮಗಳೂರಿನ ಹಿರಿಯ ಪತ್ರಕರ್ತರು ಸಾಹಿತ್ಯ ವಿಮರ್ಶಕರು ಪರಿಸರ ತಜ್ಞರು ಆದ ಸ. ಗಿರಿಜಾ ಶಂಕರ್ ಅವರನ್ನು ಹಾಗೂ ಕಲೆ ಸಾಹಿತ್ಯ ಸಂಗೀತ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷವಾದ ಸೇವೆ ಸಲ್ಲಿಸಿರುವ ಶೃಂಗೇರಿಯ ಶೈಲಜಾ ರತ್ನಾಕರ ಹೆಗ್ಗಡೆ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಿದ್ದು ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!