May 5, 2024

MALNAD TV

HEART OF COFFEE CITY

ಗಂಧದ ಮರ ಕಳವು ಪ್ರಕರಣ; ಲಕ್ಷಾಂತರ ಮೌಲ್ಯದ ಗಂಧ ವಶ

1 min read

ಚಿಕ್ಕಮಗಳೂರು: ಗಂಧದ ಮರ ಕಳವು ಹಿನ್ನಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಇದು ಮಾರಾಟಕ್ಕಾಗಿ ಮಾಡಿರುವುದು, ದಂಧೆಯಲ್ಲ ಎಂದು ಅರಣ್ಯ ಅಧಿಕಾರಿ ಶಿವರಾಜ್ ಹೇಳಿದರು.
ಚಿಕ್ಕಮಗಳೂರು ಜಿಲ್ಲೆ ರತ್ನಗಿರಿ ಬೋರೆಯಲ್ಲಿ ಸುಮಾರು 10 ಕೆಜಿ ತೂಕದ ಗಂಧದ ಮರವನ್ನು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಾಕಿಂಗ್ ಹೋಗುವಂತ ಸಂದರ್ಭದಲ್ಲಿ ಸಾರ್ವಜನಿಕರು ವಿಡಿಯೋ ಹಾಕಿದ್ದರು ಈ ಹಿನ್ನೆಲೆಯಲ್ಲಿ ನಾವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ ಎಂದರು. ಯಾವ ಸಮಯದಲ್ಲಿ ಮರ ಕಳವು ಮಾಡಲು ಪ್ರಯತ್ನಿಸಿದ್ದಾರೆ ಎಂದು ನಿಗದಿತವಾಗಿ ತಿಳಿದುಬಂದಿಲ್ಲ. ಇರುವಂತಹ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

ರತ್ನಗಿರಿ ಗಾರ್ಡನ್ ಟ್ರಸ್ಟ್ ಮೇಲ್ವಿಚಾರಕ ಮಂಜುನಾಥ್ ಮಾತನಾಡಿ, ಇಲ್ಲಿ ಆಗಾಗ ಈ ರೀತಿಯ ಮರ ಕಳವು ಪ್ರಕರಣಗಳು ನಡೆಯುತ್ತಿರುತ್ತದೆ ಆದಷ್ಟು ಬೇಗ ಅರಣ್ಯ ಇಲಾಖೆಯವರು ಕ್ಯಾಮೆರಾ ಅಳವಡಿಕೆ ಮಾಡಬೇಕು. ಅಷ್ಟೇ ಅಲ್ಲದೆ ನಾವು ಈ  ಮಾಹಿತಿಯನ್ನು ಅರಣ್ಯ ಇಲಾಖೆ ಹಾಗೂ ಮೇಲಧಿಕಾರಿಗಳಿಗೆ ತಿಳಿಸುತ್ತೇವೆ. ನಂತರ ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದಾರೆ. ಈ ರೀತಿಯ ಪ್ರಕರಣಗಳು ಕಡಿಮೆಯಾಗಬೇಕಾದಲ್ಲಿ ಸಿಸಿಟಿವಿಗಳ ಅಳವಡಿಕೆ ಮಾಡುವುದರ ಜೊತೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ನೇಮಕ ಮಾಡುವುದು ಉತ್ತಮ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!