May 4, 2024

MALNAD TV

HEART OF COFFEE CITY

ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಸರ್ಕಾರಿ ಗೌರವ ನೀಡುವಂತೆ ಮನವಿ

1 min read
Sangolikki rayanna To the portrait Government Respect Request to give

Sangolikki rayanna To the portrait Government Respect Request to give

ಚಿಕ್ಕಮಗಳೂರು : ಜನವರಿ 26 ಹಾಗೂ ಆಗಸ್ಟ್ 15 ರಂದು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ವಿಶೇಷ ಗೌರವ ನೀಡಲು ಆದೇಶಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿದರು.
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ 1976 ಆಗಸ್ಟ್ 15, ಆಗಸ್ಟ್ 15 ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ದಿನ. 1831 ಜನವರಿ 26 ಅವರನ್ನು ಗಲ್ಲಿಗೇರಿಸಿದ ದಿನ, ಜನವರಿ 26 ಗಣರಾಜ್ಯೋತ್ಸವ ದಿನ. ಎರಡು ದಿನಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಮತ್ತು ಹುತಾತ್ಮರಾದ ದಿನಗಳಾಗಿದ್ದು, ಅವರ ಸ್ಮರಣಾರ್ಥವಾಗಿ ಈ ಎರಡು ದಿನದಂದು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಶಾಲಾ-ಕಾಲೇಜ್ಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನೀಡಲು ಸರ್ಕಾರ ಆದೇಶಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು.
ಈ ವೇಳೆ ಜಿಲ್ಲಾ ಅಧ್ಯಕ್ಷ ಬಸವರಾಜ್, ಜಿಲ್ಲಾ ಗೌರವಾಧ್ಯಕ್ಷ ರಘು, ತಾಲೂಕು ಅಧ್ಯಕ್ಷ ಡಿ.ಜಿ ರಂಗನಾಥ, ಉಪಾಧ್ಯಕ್ಷ ಜಿ.ಎಂ. ಹರ್ಷವರ್ಧನ, ತರೀಕೆರೆ ತಾಲೂಕು ಅಧ್ಯಕ್ಷ ಕರುಣಾಕರ ಮುಖಂಡರಾದ ಜಗದೀಶ್ ಗೋಪಾಲಪ್ಪ ಆರ್, ಹಾಗೂ ರಂಗನಾಥ್ ಎಂ.ಟಿ ಮುಂತಾದವರಿದ್ದರು.

 

ಬಸ್ ಓಡಿಸುವ ವಿಚಾರಕ್ಕೆ ಸಾರಿಗೆ ಅಧಿಕಾರಿಗಳಿಗೂ ಹಾಗೂ ಖಾಸಗಿ ಬಸ್ ಮಾಲೀಕರ ನಡುವೆ ಮಾತಿನ ಚಕಮಕಿ

ಸಾರ್ವಜನಿಕರೆಲ್ಲರಿಗೂ ಕೊರೋನ ಲಸಿಕೆ ನೀಡುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!