May 3, 2024

MALNAD TV

HEART OF COFFEE CITY

ತಟ್ಟೆ ಲೋಟ ಬಡಿದು ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆ

1 min read

ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ. ನೌಕರರು ಕುಟುಂಬ ಸಮೇತ ಬಂದು ರಸ್ತೆ ಮಧ್ಯೆ ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಆರನೇ ವೇತನ ಆಯೋಗದ ಜಾರಿಗೆ ಪಟ್ಟುಹಿಡಿದು ಪ್ರತಿಭಟನೆಗೆ ಮುಂದಾಗಿರುವ ಸಾರಿಗೆ ನೌಕರರ ಪ್ರೊಟೆಸ್ಟ್ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. 6 ನೇ ದಿನವಾದ ಇಂದು ಸಾರಿಗೆ ಸಿಬ್ಬಂದಿಗಳು ಹೆಂಡತಿ, ಮಕ್ಕಳು ಹಾಗೂ ಪೋಷಕರೊಂದಿಗೆ ಸರ್ಕಾರದ ವಿರುದ್ಧ ತಟ್ಟೆ-ಲೋಟ ಬಡಿದು ಆಕ್ರೋಶ ಹೊರಹಾಕಿದ್ದಾರೆ. ಸುಮಾರು 300 ಕ್ಕೂ ಅಧಿಕ ಮಂದಿ ಜಮಾಯಿಸಿ ಸರ್ಕಾರ ಹಾಗೂ ಸಾರಿಗೆ ಸಚಿವರ ವಿರುದ್ಧ ಕಿಡಿ ಕಾರಿದರು. ನಿಮ್ಮಿಂದ ಇಂದು ನಾವು ಬೀದಿಗೆ ಬಂದಿದ್ದೇವೆ. ಮಾರ್ಚ್ ತಿಂಗಳ ಸಂಬಳ ನೀಡಿಲ್ಲ. ತಿನ್ನೋಕೆ ಅನ್ನ ಇಲ್ಲ. ನಾವು ಇಂದು ಇಲ್ಲಿ ಕೂತಿದ್ದೇವೆ ಅಂದ್ರೆ ಅದಕ್ಕೆ ನೀವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು, ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!