ಕೊಪ್ಪ ಕಾಲೇಜಲ್ಲಿ ಮುಗಿಯದ ಸ್ಕಾರ್ಫ್-ಕೇಸರಿ ಶಾಲು ವಿವಾದ : ಸ್ಟೂಡೆಂಟ್ ಪ್ರೊಟೆಸ್ಟ್
1 min read
ಚಿಕ್ಕಮಗಳೂರು ಕಳೆದ ಎರಡು ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಸ್ಕಾರ್ಫ್-ಕೇಸರಿ ಶಾಲು ವಿವಾದ ಪ್ರತಿಭಟನೆಯ ರೂಪ ಪಡೆದಿದೆ. ಅನ್ಯ ಕೋಮಿನ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನ ವಿರೋಧಿಸಿ ಮತ್ತೊಂದು ಕೋಮಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಲ್ಯ ಧರಿಸಿ ಬಂದಿದ್ದರು. ಒಂದು ಕೋಮಿನ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಬರುವುದಕ್ಕೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಸಮಾನ ವಸ್ತ್ರ ಸಂಹಿತೆ ಇರಬೇಕು. ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಮವಸ್ತ್ರ ಧರಿಸಬೇಕು. ಕಾಲೇಜಿನಲ್ಲಿ ಸ್ಕಾರ್ಫ್ ಧರಿಸುವವರೆಗೂ ನಾವು ಕೇಸರಿ ಶಾಲು ಧರಿಸುತ್ತೇವೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಇತ್ತ ಸ್ಕಾರ್ಫ್ ವಿರುದ್ಧ ಪ್ರತಿಭಟನೆಗೆ ಕೂತ ವಿದ್ಯಾರ್ಥಿಗಳ ಮನವೋಲಿಸುವಲ್ಲಿ ಪ್ರಾಂಶುಪಾಲರು ವಿಫಲರಾಗಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲರ ಮಧ್ಯೆ ಮಾತಿನ ಚಕಮಕಿ ಕೂಡ ನಡೆದಿದೆ. ಬಳಿಕ ಕಾಲೇಜಿನ ಪ್ರಾಂಶುಪಾಲರು ಜನವರಿ 10ರಂದು ಕಾಲೇಜಿನ ಸಭಾಂಗಣದಲ್ಲಿ ಪೆÇೀಷಕರ ಸಭೆ ಕರೆದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಅಲ್ಲಿಯವರೆಗೆ ಕಾಲೇಜಿನಲ್ಲಿ ಸಮವಸ್ತ್ರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಪೋಷಕರ ಸಭೆಯಲ್ಲಿ ಎಲ್ಲಾ ಕೋಮಿನ ವಿದ್ಯಾರ್ಥಿಗಳ ಪೋಷಕರು ಇರುತ್ತಾರೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಡ್ರೆಸ್ ಕೋಡ್ ಬಗ್ಗೆ ವಿವರಣೆ ನೀಡುತ್ತಾರೆ. ಆಗ ಪ್ರಾಂಶುಪಾಲರು ಏನು ಮಾಡುತ್ತಾರೋ, ಯಾವ ರೀತಿ ಕಠಿಣ ಕ್ರಮಕೈಗೊಳ್ಳುತ್ತಾರೋ, ಸ್ಕಾರ್ಫ್-ಕೇಸರಿ ಶಲ್ಯದ ಸಮಸ್ಯೆಗೆ ಪರಿಹಾರ ಸಿಗುತ್ತೋ ಅಥವ ಹಾಗೇ ಮುಂದುವರೆಯುತ್ತೋ ಗೊತ್ತಿಲ್ಲ. ಓದಿನ ಹಂತದಲ್ಲೇ ಈ ರೀತಿಯ ಆರೋಪ-ಪತ್ಯಾರೋಪದ ಬಗ್ಗೆ ಸಾರ್ವಜನಿಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಸರ್ಕಾರವೇ ಒಂದು ಸೂಕ್ತ ನಿರ್ಣಯ ಕೈಗೊಳ್ಳುವುದು ಸೂಕ್ತ ಅನ್ನಿಸುತ್ತದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g