April 29, 2024

MALNAD TV

HEART OF COFFEE CITY

ಸಾಹಿತ್ಯ ಸಿರಿ ಪ್ರಶಸ್ತಿಗೆ ಆಯ್ಕೆ

1 min read

 

19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಮಾರ್ಚ್ 29 ರ ಶುಕ್ರವಾರ ಮತ್ತು 30 ರ ಶನಿವಾರ ನಡೆಸಲು ನಿರ್ಣಯಿಸಲಾಗಿದೆ. 29 ರ ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗುವ ಸಮ್ಮೇಳನವು 30 ರ ರಾತ್ರಿ 9 ರವರೆಗೆ ನಿರಂತರವಾಗಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿವೆ. ಹೀಗೆ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ *ಸಾಹಿತ್ಯ ಸಿರಿ* ಪ್ರಶಸ್ತಿಗೆ ಭದ್ರಾವತಿ ಮತ್ತು ಬೆಂಗಳೂರು ಆಕಾಶವಾಣಿ ಕೇಂದ್ರದ ನಿಲಯದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಕವಿ, ಲೇಖಕ, ಸಾಹಿತ್ಯ ವಿಮರ್ಶಕರೂ ಆದ ತರೀಕೆರೆ *ಡಾ. ಎ. ಎಸ್. ಶಂಕರನಾರಾಯಣ* ಅವರನ್ನು ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾದ ಸೇವೆ ಸಲ್ಲಿಸಿರುವ ಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಕೊಪ್ಪ ತಾಲ್ಲೂಕಿನ *ದೀಪ ಹಿರೇಗುತ್ತಿ* ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಿದ್ದು ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!