May 5, 2024

MALNAD TV

HEART OF COFFEE CITY

ಪೊಲೀಸರ ಕಣ್ ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಶಿಗ್ಲಿ ಬಸ್ಯ ಅರೆಸ್ಟ್

1 min read

ಚಿಕ್ಕಮಗಳೂರು: ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಮಲೆನಾಡ ಶಿಗ್ಲಿ ಬಸ್ಯನನ್ನು ಬಾಳೆಹೊನ್ನೂರು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಪೊಲೀಸರ ಕಣ್ ತಪ್ಪಿಸಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ರಾತ್ರೋರಾತ್ರಿ ತಪ್ಪಿಸಿಕೊಂಡಿದ್ದ ಕುಖ್ಯಾತ ರೌಡಿ ಪೂರ್ಣೇಶ್ ನನ್ನು ಮತ್ತೊಮ್ಮೆ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ತನ್ನ ಸ್ವಗ್ರಾಮ ಖಾಂಡ್ಯದ ಮಾಗಲು ಬ್ರಿಡ್ಜ್ ಬಳಿ ಓಡಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿ ಶೀಟರ್ ಪೂರ್ಣೇಶ್ ಪೊಲೀಸರ ಮೇಲೆ ಲಾಂಗ್ ಬೀಸುವ ವೇಳೆ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ವೇಳೆ ತನ್ನ ಕಾಲಿ‌ನ ಗಾಯ ವಾಸಿಯಾಗಿಲ್ಲ ಎಂದು ನಟಿಸಿ ಕಾವಲಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಇವನ ಬಂಧನಕ್ಕೆ ಆರು ತಂಡ ರಚಿಸಲಾಗಿತ್ತು, ಬಾಳೆಹೊನ್ನೂರು ಠಾಣೆ ಪಿಎಸ್.ಐ ದಿಲೀಪ್ ಕುಮಾರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಚಿಕ್ಕಮಗಳೂರು ನಗರ ಠಾಣೆಯಲ್ಲೂ ಎಸ್ಕೇಪ್ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಇಲ್ಲಿಗೆ ಕರೆತರುವ ಸಾಧ್ಯತೆ ಇದೆ. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!