ಮಡಿಕೆ ತಯಾರಿಸಿ ಗಮನ ಸೆಳೆದ ಶೋಭಾ ಕರಂದ್ಲಾಜೆ
1 min readಚಿಕ್ಕಮಗಳೂರು: ಮೂಡಿಗೆರೆಯಲ್ಲಿ ನಡೆದ ಕುಂಬಾರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವೇದಿಕೆಯಲ್ಲೇ ಮಡಿಕೆ ತಯಾರು ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.
ಕುಂಬಾರ ಯಾನೆ ಕುಲಾಲ ಸಮುದಾಯ ಸುಗ್ಗಿ ಪೂಜೆ ಮಾಡುತ್ತಾರೆ ಯಾವುದೇ ಶುಭ ಕಾರ್ಯಕ್ಕೂ ಅಗ್ರ ಪೂಜೆ ಕುಂಬಾರರದ್ದಾಗಿರುತ್ತದೆ ಎಂದು ಮೂಡಿಗೆರೆ ರೈತ ಭವನದಲ್ಲಿ ನಡೆದ ಸಮಾಜದ ವಾರ್ಷಿಕೋತ್ಸವದಲ್ಲಿ ಕೇಂದ್ರ ಸಚಿವೆ ಶೋಭಾ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕುಂಬಾರ ಸಮುದಾಯ ಭವನಕ್ಕೆ ನಿವೇಶನ ಕಲ್ಪಿಸುವ ಭರವಸೆ ನೀಡಿದರು.
ಚಿತ್ರದುರ್ಗದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ಮಾತನಾಡಿ ಕುಂಬಾರರು ಬೆಳೆದು ಬಂದ ಹಾದಿ ತಿಳಿಸಿಕೊಟ್ಟರು. ಅಲ್ಲದೇ ಮಡಿಕೆ ಮಾಡುವುದು ಸಮಾಜದ ಹಕ್ಕು ಎಂದು ಪ್ರತಿಪಾದಿಸಿದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸಮಾಜದ ಮಂಗಳೂರು ಜಿಲ್ಲಾಧ್ಯಕ್ಷ ಮಯೂರ್ ಉಳ್ಳಾಲ್ ಎಂದಿಗೂ ಕುಂಬಾರ ಸಮುದಾಯ ಹಿಂದೆ ಉಳಿದಿಲ್ಲ ಎಂದರು. ಇದೇ ವೇಳೆ SSLC ಪರೀಕ್ಷೆಯಲ್ಲಿ ಸಮಾಜದ 80% ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಾಜಿ ಸಚಿವೆ ಮೋಟಮ್ಮ , ದೀಪಕ್ ದೊಡ್ಡಯ್ಯ, ರಂಜನ್ ಅಜಿತ್ ಕುಮಾರ್ ಕಾರ್ಯಕ್ರಮದಲ್ಲಿ ಹಾಜರಿದ್ದರು. 2024 ರ ಕ್ಯಾಲೆಂಡರ್ ಅನ್ನು ಅತಿಥಿಗಳು ಬಿಡುಗಡೆಗೊಳಿಸಿದರು. ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ಗಂಗಾಧರ್ ಸಂಘ ಕಟ್ಟಿದ ಬಗ್ಗೆ ತಿಳಿಸಿದರು. ತಾಲೂಕು ಅಧ್ಯಕ್ಷ ಹರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g