ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಮನೆಯ ಮೇಲೆ ಗುಂಡಿನ ದಾಳಿ
1 min readಮಲ್ಲಂದೂರು : ಸ್ನೇಹಿತರ ಮಧ್ಯೆ ಜಮೀನು ವಿವಾದ ಹಾಗೂ ಹಣಕಾಸಿನ ಗಲಾಟೆ ನಡೆದ ಕಾರಣ ಸ್ನೇಹಿತನೇ ಸ್ನೇಹಿತನ ಮನೆ ಮೇಲೆ ಮನಸ್ಸೋ ಇಚ್ಛೆ ಗುಂಡು ಹಾರಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೇತನ್ ಹಾಗೂ ಕಿರಣ್ ಇಬ್ಬರೂ ಸ್ನೇಹಿತರು. ಇಬ್ಬರಿಗೂ ಹಲವು ರೀತಿಯ ವ್ಯವಹಾರವೂ ಇತ್ತು. ಇತ್ತೀಚೆಗೆ ಗ್ರಾಮದಲ್ಲಿ ಚೇತನ್ ಕಿರಣ್ ಬಗ್ಗೆ ವೈಯಕ್ತಿಕವಾಗಿ ಕೆಟ್ಟದಾಗಿ ಮಾತನಾಡಿದ್ದಾನೆಂದು ಕಿರಣ್ ಚೇತನ್ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಕಿರಣ್ ಮಾವ ನಾಗೇಶ್ ಗೌಡರ ಮನೆಯಲ್ಲಿ ಬಂದೂಕು ಇತ್ತು. ಗ್ರಾಮೀಣ ಭಾಗದಲ್ಲಿ ಜೀವ ಹಾಗೂ ಬೆಳೆಗಳ ರಕ್ಷಣೆಗೆ ಪೊಲೀಸ್ ಇಲಾಖೆಯೇ ನೀಡಿದ್ದ ಅನುಮತಿಯುಳ್ಳ ಗನ್. ಅದನ್ನ ತಂದ ಕಿರಣ್, ಚೇತನ್ ಮನೆ ಬಳಿ ಬಂದು ಕೂಗಾಡಿದ್ದಾನೆ. ಆಗ ಚೇತನ್ ತಾಯಿ ಕಿಟಕಿ ತೆಗೆದು ವಿಚಾರಿಸಿದಾಗ ಮನಸ್ಸೋ ಇಚ್ಛೆ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಚೇತನ್ ಮನೆಯವರು ಯಾರೂ ಹೊರಬಂದಿಲ್ಲ. ಹಾಗಾಗಿ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸುಮಾರು ಮೂರ್ನಾಲ್ಕು ಗುಂಡು ಹಾರಿಸಿರುವುದರಿಂದ ಮನೆಯ ಬಾಗಿಲು, ಗೋಡೆ ಹಾಗೂ ಹೆಂಚಿಗೆ ಹೊಡೆದಿರುವ ಪಟ್ಟಿಯಲ್ಲೂ ಗುಂಡಿನ ಮಾರ್ಕ್ ಬಿದ್ದಿದೆ. ಅದೃಷ್ಟವಶಾತ್ ಜೀವಹಾನಿ ಸಂಭವಿಸಿಲ್ಲ. ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರಣ್ ಹಾಗೂ ಬಂದೂಕು ಪರವಾನಗಿ ಪಡೆದಿದ್ದ ಅತನ ಮಾವ ನಾಗೇಶ್ ಗೌಡ ಸೇರಿದಂತೆ ಗುಂಡಿನ ದಾಳಿ ನಡೆಸಿದ ಕಿರಣ್ಗೆ ಉಳಿಯಲು ಸಹಕಾರ ಮಾಡಿದ ಆರೋಪದ ಮೇಲೆ ಸ್ನೇಹಿತ ಲೋಹಿತ್ನನ್ನ ಬಂಧಿಸಲಾಗಿದೆ. ಘಟನೆ ಬಳಿಕ ತಲೆಮರೆಸಿಕೊಂಡಿರೋ ನಾಗೇಶ್ ಗೌಡನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ., ಕೌಶಿಕ್, ಮುಂತಾದವರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ, https://www.youtube.com/channel/UCmBISI2sn_0gamb44UFj-vQ
Credits:
Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g