May 3, 2024

MALNAD TV

HEART OF COFFEE CITY

ಆರೆಸ್ಸೆಸ್ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಶ್ರೀ ಜಿ.ಎಸ್. ಉಮಾಪತಿ

1 min read

ಬೆಂಗಳೂರು ಡಿಸೆಂಬರ್ 17, 2023: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಶ್ರೀ ಜಿ.ಎಸ್. ಉಮಾಪತಿ ಕಾರ್ಯನಿರ್ವಹಿಸಲಿದ್ದಾರೆ.

ಪರಿಚಯ:
ಶ್ರೀ ಉಮಾಪತಿಯವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಆಡನೂರು ಗ್ರಾಮದವರು‌. ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ನಂತರ ಮಂಗಳೂರಿನ ಎನ್.ಐ.ಟಿ.ಕೆ.ಯಲ್ಲಿ (ಆಗಿನ ಕೆ.ಆರ್.ಇ.ಸಿ.) ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಪೂರೈಸಿದರು. ಕರ್ನಾಟಕ ಸರ್ಕಾರದ ಪಿ.ಡಬ್ಲ್ಯು.ಡಿ. ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿ‌ ಸೇವೆ ಸಲ್ಲಿಸಿ 2018ರಲ್ಲಿ ನಿವೃತ್ತರಾದರು.

ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಇತರ ನೂತನ ಜವಾಬ್ದಾರಿಗಳು:
ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಶ್ರೀ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗದ ವಿಭಾಗ ಸಂಘಚಾಲಕರಾಗಿ ಡಾ. ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!