May 19, 2024

MALNAD TV

HEART OF COFFEE CITY

ಸಹಕಾರ ಸಾರಿಗೆ ಸಂಸ್ಥೆಗೆ ಬೀಗ ಹಾಕಿದ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಂಪನಿ

1 min read

ಚಿಕ್ಕಮಗಳೂರು : ಕಾಫಿನಾಡಿನ ಹೆಗ್ಗಳಿಕೆ, ಹಳ್ಳಿಗರ ಜೀವನಾಡಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಸಹಕಾರಿ ಸಾರಿಗೆ ಸಂಸ್ಥೆಗೆ ಬೀಗ ಬಿದ್ದಿದೆ. ಆಡಳಿತ ಮಂಡಳಿ ಸಾಲ ಮರುಪಾವತಿ ಮಾಡದ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಶ್ರೀರಾಮ್ ಟ್ರಾನ್ಸ್ಪೋರ್ಟ್ ಕಂಪನಿಯೂ ಸಾರಿಗೆ ಸಂಸ್ಥೆಗೆ ಸೇರಿದ 1 ಎಕೆರೆ 10 ಗುಂಟೆ ಜಾಗವನ್ನ ಮುಟ್ಟುಗೋಲು ಹಾಕಿಕೊಂಡಿದೆ. ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಹಾಗೂ ಆಡಳಿತ ನಿರ್ದೆಶಕರಾಗಿದ್ದ ಜಯಪ್ರಕಾಶ್ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಂಪನಿಗೆ ಸೇರಿದ ಆಸ್ತಿಯನ್ನ ಆಧಾರವಾಗಿ ನೀಡಿ 1 ಕೋಟಿ 20 ಲಕ್ಷ ಹಣವನ್ನ ಸಾಲ ಪಡೆದಿದ್ದರು. 2019ರ ಬಳಿಕ ಸಾಲವನ್ನ ಮರುಪಾವತಿ ಮಾಡಿರಲಿಲ್ಲ. ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಂಪನಿ ಅವರಿಗೆ ನೋಟಿಸ್ ಕೂಡ ನೀಡಿದ್ದರು. ಬಡ್ಡಿ ಸಹಿತ 1,31,41,210 ಮೊತ್ತವನ್ನ ನೀಡಲು ನಿರಾಕರಿಸಿದ ಕಾರಣ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಂಪನಿ ಜಿಲ್ಲಾಧಿಕಾರಿ ನ್ಯಾಯಾಲಯದ ಮೊರೆ ಹೋಗಿತ್ತು. ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶದ ಅನ್ವಯ ಸೋಮವಾರ ತಾಲೂಕು ದಂಡಧಿಕಾರಿ ಪರಮೇಶ್ ನೇತೃತ್ವದಲ್ಲಿ ಸರ್ವೇ ನಂ 97ರಲ್ಲಿರುವ ಸಹಕಾರಿ ಸಾರಿಗೆ ಸಂಸ್ಥೆಗೆ ಸೇರಿದ 1 ಎಕರೆ 10 ಗುಂಟೆ ಆಸ್ತಿಯನ್ನ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಛೇರಿಗೆ ಬಾರದಂತೆ ಬೀಗ ಹಾಕಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!