ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು : ಶಾಸಕ ಸಿ.ಟಿ.ರವಿ
1 min readಚಿಕ್ಕಮಗಳೂರು : ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು, ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಮೋದಿ, ಫ್ಲಡ್ನಲ್ಲಿ ಬರಲಿಲ್ಲ, ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ ಬಂದಿದ್ದಾರೆ ಎಂಬ ಸಿದ್ದು ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಸಿ.ಟಿ.ರವಿ, ಸುಳ್ಳು ಮತ್ತು ಸಿದ್ದರಾಮಯ್ಯನವರು ಒಂದೇ ನಾಣ್ಯದ ಎರಡು ಮುಖಗಳು, ಸುಳ್ಳು ಹೇಳುವುದರಲ್ಲಿ ಅವರಂತಹಾ ನಿಷ್ಣಾತರು ಬೇರ್ಯಾರಿಲ್ಲ, ಸುಳ್ಳಿಗೆ ಪ್ರಶಸ್ತಿ ನೀಡುವುದಾದರೆ ಸಿದ್ದರಾಮಯ್ಯ ಬಿಟ್ಟು ಬೇರ್ಯಾರಿಗೂ ಸಿಗಲ್ಲ, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ರು, ಆಕ್ಸಿಜನ್ ಪ್ಲಾಂಟ್ ಹಾಕಿದ್ರಾ, ಪ್ರತಿ ಆಸ್ಪತ್ರೆಗೂ ಆಕ್ಸಿಜನ್ ಪ್ಲಾಂಟ್ ಹಾಕಿದ್ದು ಪಿಎಂ ಕೇರ್ಸ್ ನಲ್ಲಿ, ಪ್ರಧಾನಿ ಮೋದಿಯವರು ತ್ವರಿತ ನಿರ್ಧಾರ ಕೈಗೊಂಡರು, ಇಲ್ಲವಾದರೆ ಸಾವಿನ ಪ್ರಮಾಣ 10 ಪಟ್ಟು ಹೆಚ್ಚಾಗ್ತಿತ್ತು, 9 ತಿಂಗಳಲ್ಲಿ ಎಲ್ಲರಿಗೂ ಎರಡು ಡೋಸ್ ಸಿಗ್ತು, ಸಿದ್ದು ಹಾಕಿಸಿಕೊಂಡಿಲ್ವಾ, ಆ ಡೋಸೇಜ್ ಇರದಿದ್ದಿದ್ರೆ, ಸಿದ್ದುಗೆ ಸಿಗದಿದ್ದಿದ್ರೆ ಏನಾಗ್ತಿತ್ತು ಎಂದು ಊಹೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g