ಜಿಲ್ಲಾ ಆಸ್ಪತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಾಳೆ ಮೌನ ಪ್ರತಿಭಟನೆ…..
1 min readಕಸದ ಗಾಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಬದುಕನ್ನು ಬೀದಿಗೆ ತಳ್ಳುವಂತಹ ಕೆಲಸವನ್ನು ಮಾಜಿ ನಗರ ಸಭಾ ಸದಸ್ಯರು ಮಾಡುತ್ತಿದ್ದಾರೆ, ಕೂಡಲೇ ಶಾಸಕರು ಮಧ್ಯ ಪ್ರವೇಶಿಸಿ ಪೌರಕಾರ್ಮಿಕರ ಬದುಕನ್ನು ರಕ್ಷಣೆ ಮಾಡಬೇಕೆಂದು ಜೆ.ಡಿ.ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್ ದೇವರಾಜ್ ಒತ್ತಾಯಿಸಿದ್ರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಜೆ.ಪಿ.ಯ ಮಾಜಿ ನಗರ ಸಭಾ ಅಧ್ಯಕ್ಷರುಗಳು ಕಾನೂನು ಬಾಹಿರವಾಗಿ ನಗರಸಭೆಯ ಕಸದ ಗಾಡಿಯ ಟೆಂಡರ್ ಪಡೆದಿರುವುದಲ್ಲದೆ, ಈ ಹಿಂದೆ ಕೆಲಸ ಮಾಡುತ್ತಿದ್ದ ಪೌರಕಾರ್ಮಿಕರನ್ನು ಬೀದಿಗೆ ತಳ್ಳಿದ್ದಾರೆ. ಕೂಡಲೇ ಬೀದಿಗೆ ಬಿದ್ದ ಪೌರಕಾರ್ಮಿಕರ ಬದುಕಿಗೆ ಭದ್ರತೆ ನೀಡಬೇಕೆಂದು ಹೇಳಿದರು.
ಇದೇ ವೇಳೆ ಮಾತನಾಡಿದ ಬಿ.ಎಸ್.ಪಿ ಪಕ್ಷದ ಜಿಲ್ಲಾಧ್ಯಕ್ಷ ರಾಧಕೃಷ್ಣ, ಕೊರೋನಾ ತುರ್ತು ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶನಿವಾರದಂದು ಗಾಂಧಿ ಮೈದಾನದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಅಗತ್ಯ ಸೌಲಭ್ಯಗಳಿದ್ದು ಕೊರೋನಾ ಪೀಡಿತರ ಬದುಕಿನ ಜೊತೆ ಚೆಲ್ಲಾಟವಾಡುವ ಖಾಸಗಿ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರ ಕೊರೋನಾ ತಡೆಯಲು ಬೇಕಾದ ಅಗತ್ಯ ಸೌಲಭ್ಯವನ್ನು ಹಳ್ಳಿಯಿಂದಲೂ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಎಂ.ಎಲ್ ಮೂರ್ತಿ ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g