May 9, 2024

MALNAD TV

HEART OF COFFEE CITY

ಸೇವೆ ಖಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಮೌನ ಪ್ರತಿಭಟನೆ

1 min read

ಚಿಕ್ಕಮಗಳೂರು: ಸೇವಾ ಖಾಯಮಾತಿಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಇಂದು ಮೌನ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಯಂತೆ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಇನ್ನೂ ಮುಂದಾಗದಿರುವುದನ್ನು ಖಂಡಿಸಿ ನಗರದ ವಿವಿಧ ಕಾಲೇಜುಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಐಡಿಎಸ್.ಜಿ ಕಾಲೇಜು ಅತಿಥಿ ಉಪನ್ಯಾಸಕರು ನಗರದ ಬಿ.ಈ.ಓ ಕಚೇರಿಯಿಂದ ಮತ್ತೊಂದೆಡೆ ಸರ್ಕಾರಿ ಮಹಿಳಾ ಕಾಲೇಜಿನಿಂದ ಮೌನ ಮೆರವಣಿಗೆಯಲ್ಲಿ ತೆರಳಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಯಿತು. ಕೂಡಲೇ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸದಿದ್ದರೆ ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸುವರ್ಣಸೌಧದ ಎದುರು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪರ್ವತೇಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!