May 4, 2024

MALNAD TV

HEART OF COFFEE CITY

ಸಂದರ್ಭದ ದುರ್ಲಾಭ ಪಡೆಯೋ ಪಾಪಿಗಳಿಗೆ ಪ್ರಾಯಶ್ಚಿತ್ತ ಇಲ್ಲ : ಶಾಸಕ ಸಿ.ಟಿ. ರವಿ

1 min read

ಚಿಕ್ಕಮಗಳೂರು : ಸಂದರ್ಭದ ದುರ್ಲಾಭ ಪಡೆಯೋ ಪಾಪಿಗಳು, ಯಾವುದರಲ್ಲೂ ಪ್ರಾಯಶ್ಚಿತ ಮಾಡಿಕೊಳ್ಳಲು ಆಗಲ್ಲ, ಅವರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಸಿ.ಟಿ.ರವಿ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೆಡ್ ಬ್ಲಾಕ್ ದಂಧೆಗೆ ಪ್ರತಿಕ್ರಿಯೇ ನೀಡಿದ ಅವರು, ಇದೊಂದು ಹೇಯ ಕೃತ್ಯ ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮವಾಗಬೇಕೆಂದು ಆಗ್ರಹಿಸಿದ್ದಾರೆ.

 ಮೊದಲು ಮೆಡಿಕಲ್ ಸೀಟ್ ಬ್ಲಾಕ್ ಕೇಳಿದ್ದೆ. ಆದರೆ, ಇಂತಹಾ ವಿಷಮ ಸಂದರ್ಭದಲ್ಲಿ ಕೋವಿಡ್ ಬೆಡ್ ಬ್ಲಾಕ್ ಮಾಡಿ ಬ್ಲಾಕ್ ಮಾರ್ಕೇಟ್ ಮಾಡುವ ಪಾಪಿಗಳನ್ನ ಈಗಲೇ ಕೇಳಿದ್ದು, ಅವರು ಯಾವುದರಲ್ಲೂ ಪ್ರಾಯಶ್ಚಿತ ಮಾಡಿಕೊಳ್ಳಲು ಆಗಲ್ಲ, ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದಿದ್ದಾರೆ. ಸಾವಿರಾರು ಜನರ ಸಾವಿಗೆ ಕಾರಣರಾದವರ ಪಾಪ ಕೃತ್ಯಕ್ಕೆ ಕ್ಷಮೆ ಇಲ್ಲ, ಅವರ ಬಗ್ಗೆ ಯಾರೂ ಸಮರ್ಥನೆ ಮಾಡಲು ಆಗಲ್ಲ, ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ. ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಕ್ಕಿಲ್ಲ ಎಂದರೆ ಅದಕ್ಕೆ ಇಂತಹಾ ಪಾಪಿಗಳೇ ಕಾರಣ ಎಂದರು. ಯಾವ ಆಸ್ಪತ್ರೆ, ಇದರಲ್ಲಿ ಯಾರುಯಾರು ಶಾಮೀಲಾಗಿದ್ದಾರೆ ಎಲ್ಲಾ ಹೊರಬರಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!