May 19, 2024

MALNAD TV

HEART OF COFFEE CITY

ಕುಡಿದ ಮತ್ತಿನಲ್ಲಿ ಅತ್ತೆ ಕೊಂದ ಅಳಿಯ

1 min read

ಕುಡಿದ ಮತ್ತಿನಲ್ಲಿ ಅಳಿಯನೇ ಅತ್ತೆಯನ್ನ ಕೊಲೆಗೈದಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ. ಮೃತರನ್ನ 60 ವರ್ಷದ ಕಾಳಮ್ಮ ಎಂದು ಗುರುತಿಸಲಾಗಿದೆ. ರಮೇಶ್ 35 ಅತ್ತೆಯನ್ನ ಕೊಂದ ಅಳಿಯ. ಊರೂರು ಮೇಲೆ ಕೆಲಸಕ್ಕೆ ಹೋಗುವ ರಮೇಶ್ ಮಧ್ಯಾಹ್ನ ಮನೆಗೆ ಬಂದಿದೆ. ಬಂದಾಗಲೇ ಅತ್ತೆ ಜೊತೆ ಸಣ್ಣದಾಗಿ ಜಗಳವಾಡಿ ಸಮಾಧಾನವಾಗಿದ್ದ.

ಸಂಜೆ ಆತನೇ ಹೋಗಿ 5 ಕ್ವಾಟರ್ ಎಣ್ಣೆ, ಚಿಕನ್ ಹಾಗೂ ಫೋರ್ಕ್ ತಂದಿದ್ದನು. ರಾತ್ರಿ ಆರೋಪಿ ರಮೇಶ್, ಪತ್ನಿ ಮಂಜುಳ ಹಾಗೂ ಅತ್ತೆ ಕಾಳಮ್ಮ ಎಲ್ಲರೂ ಮದ್ಯ ಸೇವಿಸಿ ಊಟ ಮಾಡಿದ್ದಾರೆ. ಬಳಿಕ ಮತ್ತೆ ಮಾತಿಗೆ ಮಾತು ಬೆಳೆದು ಇಬ್ಬರು ನಡುವೆ ಜಗಳ ನಡೆದಿದೆ. ಈ ವೇಳೆ, ಆರೋಪಿ ರಮೇಶ್ ಮೃತ ಕಾಳಮ್ಮ ಮೇಲೆ ಹಲ್ಲೆ ಮಾಡಿದ್ದಾನೆ. ಅವರ ತಲೆ, ಕುತ್ತಿಗೆ ಬಳಿ ಗಾಯವಾಗಿತ್ತು, ನನ್ನ ಗಂಡನೇ ಹೊಡೆದು, ಪೊರಕೆಯಲ್ಲಿ ಹೊಡೆದು ಮನೆಯಿಂದ ಆಚೆ ತಳ್ಳಿದ್ದ ಎಂದು ರಮೇಶ್ ಪತ್ನಿ ಮಾಹಿತಿ ನೀಡಿದ್ದಾಳೆ. ಹಲ್ಲೆ ಮಾಡಿ ರಾತ್ರಿ ಹೊರಗಡೆ ತಳ್ಳಿದ್ದ ಕಾಳಮ್ಮ ಇಡೀ ರಾತ್ರಿ ಚಳಿಯಲ್ಲಿ ಹೊರಗಿದ್ದು ಸಾವನ್ನಪ್ಪಿದ್ದಾಳೆ.

ಮೃತ ಕಾಳಮ್ಮ ಕಣ್ಣು ಕೂಡ ಮುಚ್ಚಿಲ್ಲ. ಹಾಗೇ ಸಾವನ್ನಪ್ಪಿದ್ದಾಳೆ. ಬೆಳಗ್ಗೆ ವಿಷಯ ತಿಳಿದು ರಮೇಶ್ ನಾಪತ್ತೆಯಾಗಿದ್ದ. ಬಳಿಕ ವಿಷಯ ತಿಳಿದ ಪೊಲೀಸರು ಆರೋಪಿ ರಮೇಶ್‍ರನ್ನ ಬಂಧಿಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!