May 17, 2024

MALNAD TV

HEART OF COFFEE CITY

ಪೊಲೀಸ್ ಇಲಾಖೆಯಿಂದ ಜಪ್ತಿ ಮಾಡಿದ ವಸ್ತುಗಳು ವಾರಸುದಾರರಿಗೆ ಹಸ್ತಾಂತರಿಸಿದ ಎಸ್ಪಿ ಉಮಾ ಪ್ರಶಾಂತ್

1 min read

 ವಿವಿಧ ಪ್ರಕರಣಗಳಲ್ಲಿ ಕಳುವಾಗಿದ್ದ 30 ಮೊಬೈಲ್ ಫೋನ್‍ಗಳನ್ನು ಪತ್ತೆ ಹಚ್ಚಲಾಗಿದ್ದು, ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಲಸಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಉಮಾಪ್ರಶಾಂತ್ ತಿಳಿಸಿದರು.
ಬುಧವಾರ ಎಸ್ಪಿ ಕಚೇರಿ ಸಭಾಂಗಣದಲ್ಲಿ ಸಿಇಐಆರ್ ಪೋರ್ಟಲ್‍ನಲ್ಲಿ ದಾಕಲಾದ ಪ್ರಕರಣಗಳ ಸಂಬಂಧ ವಶಪಡಿಸಿಕೊಳ್ಳಲಾದ ಮೊಬೈಲ್ ಫೋನ್‍ಗಳನ್ನು ಕಳೆದುಕೊಂಡವರಿಗೆ ವಾಪಾಸ್ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೂರ ಸಂಪರ್ಕ ಇಲಾಖೆ ವತಿಯಿಂದ ಸಿಇಐಆರ್(ಸೆಂಟ್ರಲ್ ಎಕ್ಯುಪ್‍ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್ ಅಭಿವೃದ್ಧಿ ಪಡಿಸಲಾಗಿದೆ. ನಾಗರೀಕ ಸ್ನೇಹಿ ವೆಬ್ ಪೋರ್ಟಲ್ ಆಗಿದೆ ಎಂದು ಹೇಳಿದರು.ಮೊಬೈಲ್ ಕಳೆದುಕೊಂಡವರು ಪೋರ್ಟಲ್‍ನಲ್ಲಿ ರಿಜಿಸ್ಟರ್ ಮಾಡಿದರೆ ಆ ಬಗ್ಗೆ ಪೊಲೀಸರಿಗೆ ಮಾಹಿತಿ ಬರುತ್ತದೆ. ಈ ರೀತಿ ರಿಜಿಸ್ಟರ್ ಮಾಡುವುದರಿಂದ ಬೇರೆಯವರು ಆ ಮೊಬೈಲನ್ನು ಬಳಸದ ರೀತಿ ನಂಬರ್‍ನ್ನು ಬ್ಲಾಕ್ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ ಆ ಮೊಬೈಲ್‍ನ್ನು ಯಾರಾದರೂ ಬಳಸುತ್ತಿದ್ದರೆ ಪೊಲೀಸ್ ಇಲಾಖೆಗೆ ಅಲರ್ಟ್ ಮೆಸೇಜ್ ಬರುತ್ತದೆ. ಇದರ ಆಧಾರದಲ್ಲಿ ಈ ವರೆಗೆ 30 ಮೊಬೈಲ್‍ಗಳನ್ನು ಪತ್ತೆ ಹಚ್ಚಿದ್ದೇವೆ ಎಂದರು.

 

ಇನ್ನೂ 110 ಮೊಬೈಲ್‍ಗಳ ಬಗ್ಗೆ ಮಾಹಿತಿಗಳು ಸಿಕ್ಕಿವೆ. ಕೆಲವರು ಬೇರೆ ಬೇರೆ ರಾಜ್ಯಗಳಲ್ಲಿ ಆಕ್ಟೀವ್ ಆಗಿವೆ ಅದನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ ವಾರಸುದಾರರಿಗೆ ನೀಡಲಾಗುವುದು ಎಂದು ತಿಳಿಸಿದರು.ಈ ವರೆಗೆ ನಮ್ಮ ಜಿಲ್ಲೆಯಲ್ಲಿ 377 ಮೊಬೈಲ್‍ಗಳನ್ನು ಜನರು ಕಳೆದುಕೊಂಡಿದ್ದಾರೆ. ಈ ಬಗ್ಗೆ ವೆಬ್ ಪೋರ್ಟಲ್ ಮತ್ತು ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿದೆ. ಈ ಪೈಕಿ ಈ ವರೆಗೆ ಒಟ್ಟು 144 ಮೊಬೈಲ್‍ಗಳು ಇರುವಿಕೆ ಬಗ್ಗೆ ವರದಿಗಳು ಸಿಕ್ಕಿವೆ. ಅವುಗಳನ್ನು ಬೇರೆ ಬೇರೆಯವರು ಉಪಯೋಗಿಸುತ್ತಿದ್ದಾರೆ. ಕೆಲವರು ಮತ್ತೆ ಸ್ವಿಚ್ ಆಫ್ ಮಾಡಿದ್ದಾರೆ. ಇನ್ನೂ ಕೆಲವು ಬೇರೆ ಬೇರೆ ರಾಜ್ಯಗಳಲ್ಲಿ ಉಪಯೋಗಿಸಲ್ಪಡುತ್ತಿವೆ. ಅವುಗಳನ್ನು ಶೀಘ್ರದಲ್ಲೇ ಕಂಡು ಹಿಡಿದು ತರಿಸಿಕೊಂಡು ವಾರಸುದಾರರಿಗೆ ನೀಡುವ ಕೆಲಸ ಆಗುತ್ತದೆ ಎಂದರು.ಈಗ 30 ಮೊಬೈಲ್ ಫೋನ್‍ಗಳನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿರುವ ಸೆನ್ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂದಿಗಳನ್ನು ಅಭಿನಂದಿಸುತ್ತೇವೆ ಎಂದು ತಿಳಿಸಿದರು.ಇದೇ ವೇಳೆ ಕಳೆದುಕೊಂಡಿದ್ದ ಮೊಬೈಲ್ ಪೊಲೀಸರ ಮುಖಾಂತರ ಮತ್ತೆ ಕೈ ಸೇರಿದ ಬಗ್ಗೆ ಮಾಲೀಕರು ಸಂತಸ ವ್ಯಕ್ತಪಡಿಸಿದರು. ಸಹಸ್ರಾರು ರೂ. ಬೆಲೆಯ ಮೊಬೈಲ್ ಮರಳಿ ಸಿಕ್ಕ ಸಂಭ್ರಮ ಒಂದೆಡೆಯಾದರೆ ಕೆಲವು ಮೊಬೈಲ್‍ಗಳಲ್ಲಿ ಉಪಯುಕ್ತವಾದ ದಾಖಲೆಗಳು, ಮಾಹಿತಿಗಳು ಅಳಿಸದೆ ಹಾಗೇ ಉಳಿದಿದ್ದ ಬಗ್ಗೆಯೂ ಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಅನಿಸಿಕೆ ಹಂಚಿಕೊಂಡು ಪೊಲೀಸರ ಕಾರ್ಯವನ್ನು ಶ್ಲಾಘಿಸಿದರು.ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ ಹಾಗೂ ಸೆನ್ ಘಟಕದ ಇನ್ಸ್‍ಪೆಕ್ಟರ್ ಗವಿರಾಜು ಇತರೆ ಸಿಬ್ಬಂದಿ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!