ಬೈಕ್ ಸವಾರರ ಮೇಲೆ ಏಕಾಏಕಿ ಫೈರಿಂಗ್
1 min readಚಿಕ್ಕಮಗಳೂರು : ಬೈಕ್ ನಲ್ಲಿ ಹೋಗುತ್ತಿದ್ದ ಸವಾರರ ಮೇಲೆ ಏಕಾಏಕಿ ಫೈರಿಂಗ್ ಮಾಡಿದ ಹಿನ್ನೆಲೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ ಗ್ರಾಮದಲ್ಲಿ ನಡೆದಿದೆ.
ಬಾಳೆಹೊನ್ನೂರು ಸಮೀಪದ ಬಿದರೆ ಗ್ರಾಮದ ಬಳಿ 28 ವರ್ಷದ ಪ್ರಕಾಶ್ ಹಾಗೂ 30 ವರ್ಷದ ಪ್ರವೀಣ್ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಅಚಾನಕ್ಕಾಗಿ ರಮೇಶ್ ಎಂಬಾತ ಫೈರಿಂಗ್ ಮಾಡಿದ್ದಾನೆ. ಏಕಾಏಕಿ ನಡೆದ ಫೈರಿಂಗ್ ದಾಳಿಯಿಂದಾಗಿ ಬೈಕ್ ನಲ್ಲಿದ್ದ ಪ್ರಕಾಶ್ ಹಾಗೂ ಪ್ರವೀಣ್ ಇಬ್ಬರು ಸಾವನಪ್ಪಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಫೈರಿಂಗ್ ಮಾಡಿದಾತ ಬುದ್ದಿ ಮಾಂಧ್ಯನಾಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಮೃತ ದುರ್ದೈವಿಗಳ ಕುಟುಂಬದ ರೋಧನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಾಳೆಹೊನ್ನೂರು ಪೊಲೀಸರು ಭೇಟಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g