May 12, 2024

MALNAD TV

HEART OF COFFEE CITY

ಜೆ.ವಿ.ಎಸ್ ಶಾಲೆಯಿಂದ ಶ್ರೀ ಕೃಷ್ಣಜನ್ಮಾಷ್ಟಮಿ

1 min read

ಚಿಕ್ಕಮಗಳೂರು : ಜಿಲ್ಲಾ ಒಕ್ಕಲಿಗ ಸಂಘ, ಐ.ಎಂ.ಜಿ.ಎಂ.ಎಂ. ನರ್ಸರಿ ಮತ್ತು ಪ್ರೈಮರಿ ಸ್ಕೂಲ್, ಹಾಗೂ ಜೆ.ವಿ.ಎಸ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಗಳ ವತಿಯಿಂದ ಶ್ರೀ ಕೃಷ್ಣ ಜನ್ಮಷ್ಠಾಮಿಯನ್ನು ಭಾವೈಕ್ಯತೆಯಿಂದ ಆಚರಿಸಲಾಯಿತು.

ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಏರ್ಪಡಿಸಿದ್ದ ಛದ್ಮ ವೇಷ ಸ್ಪರ್ಧೆಯಲ್ಲಿ ಶಾಲೆಯ 150 ಕ್ಕೂ ಹೆಚ್ಚು ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷವನ್ನು ಧರಿಸಿ ಭಾಗವಹಿಸಿದ್ದರು. ಶಾಲೆಯ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಧರ್ಮ ಭೇದ ಮರೆತು ಭಾವೈಕ್ಯತೆಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ತಮ್ಮ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆಯ ವೇಷ ಹಾಕಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಭಾವೈಕ್ಯತೆಯ ಸಮಾಜ ನಿರ್ಮಿಸೋಣ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!