May 14, 2024

MALNAD TV

HEART OF COFFEE CITY

100 ಬೆಡ್ ಆಸ್ಪತ್ರೆಗಾಗಿ ಶೃಂಗೇರಿ ಸಮಾನ ಮನಸ್ಕರರ ಹೋರಾಟ

1 min read

ಸರ್ಕಾರ ಮೈಕ್ ಸೆಟ್ ಬಳಸಲು ಅನುಮತಿ ನೀಡದ ಹಿನ್ನೆಲೆ 100 ಬೆಡ್ ಆಸ್ಪತ್ರೆಗೆ ಆಗ್ರಹಿಸಿ ತಮಟೆ ಭಾರಿಸಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಕಳೆದ ವರ್ಷವೂ ಶೃಂಗೇರಿಯ ಸಮಾನ ಮನಸ್ಕ ಯುವಕರ ತಂಡ 100 ಬೆಡ್ ನ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆ ಇಲ್ಲದ ಊರು. ವಾಹನ ಸವಾರರು ನಿಧಾನವಾಗಿ ವಾಹನ ಚಲಾಯಿಸುವಂತೆ ಮನವಿಯ ಬಿತ್ತಿಪತ್ರಗಳನ್ನು ಶೃಂಗೇರಿಯ ಪ್ರಮುಖ ರಸ್ತೆಗಳಲ್ಲಿ ಹಾಕಿದ್ದರು. ಶೃಂಗೇರಿ ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರ. ನಿತ್ಯ ಸಾವಿರಾರು ವಾಹನಗಳು ಶೃಂಗೇರಿಗೆ ಬಂದು ಹೋಗುತ್ತವೆ. ಏನಾದರೂ ಸಣ್ಣ ಸಮಸ್ಯೆಗೂ ಶಿವಮೊಗ್ಗ, ಉಡುಪಿ ಅಥವಾ ಮಂಗಳೂರಿಗೆ ಹೋಗಬೇಕು.

ಹಾಗಾಗಿ, ಶೃಂಗೇರಿಯ ಸಮಾನಮನಸ್ಕ ಯುವಕರು ಆಸ್ಪತ್ರೆಗಾಗಿ ಹೋರಾಟ ಆರಂಭಿಸಿದ್ದರು. ಈ ವೇಳೆ ಸರ್ಕಾರ ಹಾಗೂ ಅಧಿಕಾರಿಗಳು ಒಂದು ತಿಂಗಳ ಒಳಗಾಗಿ ಆಸ್ಪತ್ರೆಯನ್ನು ಮಂಜೂರು ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಶೃಂಗೇರಿಗೆ ಬಂದಿದ್ದ ಸಿಎಂ ಬೊಮ್ಮಾಯಿ ಕೂಡ ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ ಒಂದು ವರ್ಷವಾದರೂ ಆಸ್ಪತ್ರೆಯಾಗದ ಕಾರಣ ಯುವಕರು ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ. ಕಳೆದ ರಾತ್ರಿ ಶೃಂಗೇರಿಯ ಪ್ರಮುಖ ಬೀದಿಗಳಲ್ಲಿ ತಮಟೆ ಭಾರಿಸಿಕೊಂಡು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!