May 3, 2024

MALNAD TV

HEART OF COFFEE CITY

ಅತಿವೃಷ್ಟಿಗೊಳಗಾದ ಪ್ರದೇಶಗಳಿಗೆ ಶಾಸಕ ಟಿ.ಡಿ ರಾಜೇಗೌಡ ಭೇಟಿ : ನೆರವಿಗೆ ಧಾವಿಸಲು ಸರ್ಕಾರಕ್ಕೆ ಒತ್ತಾಯ

1 min read

ಎನ್.ಆರ್ ಪುರ : ನರಸಿಂಹ ರಾಜಪುರ ತಾಲೂಕಿನ ಬಾಳೆಹೊನ್ನೂರಿನ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಚಿಕ್ಕಮಗಳೂರು ಜಿಲ್ಲೆ ನರಸಿಂಹ ರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬೈರೆ ಗುಡ್ಡ, ಅಲಸೂರು, ಬ್ಯಾವಳ್ಳಗಳಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಹಾಗೂ ಎನ್.ಆರ್ ಪುರ ಪಟ್ಟಣದ ಕುಸಿದ ಮನೆಯೊಂದಕ್ಕೆ ಬೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅಲ್ಲದೆ ಮನೆ ಕಳೆದು ಕೊಂಡವರಿಗೆ ಸಾಂತ್ವಾನ ಹೇಳಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು. ಭೂ ಕುಸಿತ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಸಂಚಾರಕ್ಕೆ ತೊಂದರೆಯಾಗದಂತೆ ಬದಲಿ ರಸ್ತೆಗಳನ್ನು ನಿರ್ಮಿಸಿಕೊಡುವಂತೆ ಸೂಚಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!