April 29, 2024

MALNAD TV

HEART OF COFFEE CITY

ರಾಮಮಂದಿರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶೃಂಗೇರಿ ಶ್ರೀಗಳು ಹೋಗುವುದಿಲ್ಲ: ಗೌರಿ ಶಂಕರ್ ಸ್ಪಷ್ಟನೆ

1 min read

ಚಿಕ್ಕಮಗಳೂರು: ಜನವರಿ 22 ರಂದು ನಡೆಯುವ ರಾಮಮಂದಿರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಧುಶೇಖರ ಶ್ರೀಗಳು ಹೋಗುವುದಿಲ್ಲ ಎಂದು ಮಠದ ಆಡಳಿತಾಧಿಕಾರಿ ಗೌರಿ ಶಂಕರ್ ಸ್ಪಷ್ಟನೆ ನೀಡಿದ್ದಾರೆ.

ಶೃಂಗೇರಿ ಮಠದ ಇಬ್ಬರು ಗುರುವತ್ರಯರಾದ ಭಾರತೀತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಶ್ರೀಗಳು ಇಬ್ಬರು ರಾಮಮಂದಿರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಆದರೆ ಮಠದ ಪ್ರತಿನಿಧಿಯಾಗಿ ಆಡಳಿತಾಧಿಕಾರಿ ಗೌರಿಶಂಕರ್ ಅಯೋಧ್ಯೆಯ ರಾಮಮಂದಿರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.

ರಾಮ ಮಂದಿರ ಟ್ರಸ್ಟ್ ನ ಸದಸ್ಯರು ಆಗಿರುವ ವಿಧುಶೇಖರ ಶ್ರೀಗಳು ಜನವರಿ 22ಕ್ಕೆ ಅಯೋಧ್ಯೆಯಲ್ಲಿನ ರಾಮಮಂದಿರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ. ಆದರೆ, ಗುರುಗಳು ಭಕ್ತವೃಂದಕ್ಕೆ ಎಲ್ಲರೂ ಜನವರಿ 22ರಂದು ರಾಮತಾರಕ ಜಪ ಹಾಗೂ ರಾಮಭುಜಂಗ ಸ್ತೋತ್ರ ಪಠಿಸುವಂತೆ ಕರೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಒಮ್ಮೆ ಗುರುಗಳು ಅಯೋಧ್ಯೆಯ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಸುಳ್ಳು ಸುದ್ದಿಯನ್ನ ಹರಿಬಿಟ್ಟಿದ್ದರು. ಮತ್ತೊಮ್ಮೆ ಗುರುಗಳು ಅಯೋಧ್ಯೆ ಕಾರ್ಯಕ್ರಮಕ್ಕೆ ತೆರಳುತ್ತಾರೆ ಎಂದು ಸಂದೇಶ ಹಾಕುತ್ತಾರೆ. ಇದು ಶುದ್ಧ ಸುಳ್ಳು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ. ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!