May 3, 2024

MALNAD TV

HEART OF COFFEE CITY

ಮಾನವೀಯತೆ ಮರೆತ ಶೃಂಗೇರಿ ತಾಲೂಕು ಆಸ್ಪತ್ರೆ

1 min read

 

ಚಿಕ್ಕಮಗಳೂರು : ಮಹಿಳೆಯೊಬ್ಬರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ರೋಗಿಯು ಪರದಾಡಿರುವ ಘಟನೆ ಶೃಂಗೇರಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

 

ರೋಗಿಯು ತೀವ್ರ ಜ್ವರ, ವಾಂತಿಯಿಂದ ನರಳುತ್ತಿದ್ರು ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಆಸ್ಪತ್ರೆಯಲ್ಲಿ ರೋಗಿಯ ಪರದಾದುವಂತಯಿತು. ಬೆಳಗ್ಗೆಯಿಂದ ಆಸ್ಪತ್ರೆ ಒಳಗಿನ ಬೆಂಚ್ ಮೇಲೆ ಮಲಗಿದ ರೋಗಿಯ ನರಳಾಟ ಹೇಳತೀರದು.

ರೋಗಿಯುನ್ನು ಆಸ್ಪತ್ರೆ ಸಿಬ್ಬಂದಿಗಳು ದಾಖಲಿಸಿಕೊಳ್ಳದೇ 

 ಆಸ್ಪತ್ರೆ ಆವರಣದ ಬೆಂಚ್ ಮೇಲೆ ಮಲಗಿಸಿ ರೋಗಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

 

ಆಸ್ಪತ್ರೆಯಲ್ಲಿ ಬೆಡ್ ಗಳು ಇದ್ರು ದಾಖಲು ಮಾಡಿಕೊಳ್ಳದೆ, ಚಿಕಿತ್ಸೆ ನೀಡದ ಶೃಂಗೇರಿ ತಾಲೂಕು ಆಸ್ಪತ್ರೆ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಶೃಂಗೇರಿ ತಾಲೂಕು ಅಡ್ಡಗದ್ದೆ ಗ್ರಾಮದಿಂದ ಕಮಲ ಎಂಬ ಮಹಿಳೆಯು ಆಸ್ಪತ್ರೆಗೆ ಬಂದಿದ್ದು, ತೀವ್ರ ಜ್ವರ ವಾಂತಿಯಿಂದ ಅಸ್ವಸ್ಥರಾಗಿದ್ದಾರೆ. ಈ ಹಿನ್ನಲೆ ಬೆಳಗ್ಗೆ ಆಸ್ಪತ್ರೆಗೆ ಬಂದು, ಆಸ್ಪತ್ರೆಯ ಬೆಂಚ್ ಮೇಲೆ ಮಲಗಿ ಮಹಿಳೆ ನರಳಾಡಿದ್ರು ಆಸ್ಪತ್ರೆ ಸಿಬ್ಬಂದಿಗಳು ತಿರುಗಿಯು ನೋಡದೆ ಅಮಾನವೀಯತೆ ಮೆರೆದಿದ್ದಾರೆ.

 

ಮಹಿಳೆಯ ಪರದಾಟ ನೋಡಿ ಆಸ್ಪತ್ರೆ ಸಿಬ್ಬಂದಿಗೆ ಸಾರ್ವಜನಿಕರು ಕ್ಲಾಸ್ ತೆಗೆದುಕೊಂಡಿದ್ದಾರೆ.

ನಿನ್ನೆ ಚಿಕಿತ್ಸೆ ಸಿಗದೆ ಬೆಳಗ್ಗೆಯಿಂದ ಸಂಜೆವರೆಗೂ ಗೋಳಾಡಿದ ಮಹಿಳೆ ಕಮಲ ಪರವಾಗಿ ಸಾರ್ವಜನಿಕರು ಅಸ್ಪತ್ರೆ ಸಿಬ್ಬಂದಿಗೆ ಕ್ಲಾಸ್ ತೆಗದು ಕೊಳ್ಳುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಿಕೊಂಡದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!