ಕೊರೋನಾ ಆತಂಕದ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ
ಕೊರೋನಾ ಆತಂಕದ ಮಧ್ಯೆಯೂ 10ನೇ ತರಗತಿ ಮಕ್ಕಳಿಗೆ ಪರೀಕ್ಷೆ ಬೇಕಾಬೆಡ್ವಾ ಎಂಬ ಚರ್ಚೆ ಮಧ್ಯೆಯೂ ಸರ್ಕಾರ ಪರೀಕ್ಷೆಗೆ ಮುಂದಾಗಿದೆ. ಹೈಕೋರ್ಟ್ ಕೂಡ ಎಸ್.ಎಸ್.ಎಲ್.ಸಿ. ಮುಖ್ಯ ಘಟ್ಟವಾಗಿರೋದ್ರಿಂದ ಪರೀಕ್ಷೆ ನಡೆಸಬೇಕು ಎಂದಿತ್ತು. ಹಾಗಾಗಿ, ಭಯದ ಮಧ್ಯೆಯೂ ಸರ್ಕಾರ ಪರೀಕ್ಷೆಗೆ ಮುಂದಾಗಿದ್ದು ಪರೀಕ್ಷಾ ಕೇಂದ್ರದಲ್ಲಿ ಸಕಲ ಸಿದ್ಧತೆ ನಡೆಸಿದ್ದು ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷೆಗೆ ಮುಂದಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 14 ಸಾವಿರ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಒಂದು ರೂಮಿಗೆ 12 ಜನ ಮಕ್ಕಳು, ಟೇಬಲ್ ಗೆ ಓರ್ವ ವಿದ್ಯಾರ್ಥಿ ಅಷ್ಟೆ. ಪ್ರತಿ ಮಕ್ಕಳಿಗೂ ಸ್ಯಾನಿಟೈಸ್ ಹಾಕಿ, ಟೆಂಪ್ರೇಚರ್ ಟೆಸ್ಟ್ ಮಾಡಿ ಒಳಬಿಡುತ್ತಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ನಾಲ್ಕೈದು ಕಡೆ ಹಾಲ್ ಟಿಕೆಟ್ ನಂಬರ್ ಹಾಕಿ ಮಕ್ಕಳು ಗುಂಪು ಸೇರದಂತೆ ಎಚ್ಚರ ವಹಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g