May 11, 2024

MALNAD TV

HEART OF COFFEE CITY

ರಾಜ್ಯ ಸರ್ಕಾರದ್ದು ‘ಹುಲಿಯುಗುರು’ ಎಂಬ ಸದಾರಮೆ ನಾಟಕ; ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ

1 min read

ಚಿಕ್ಕಮಗಳೂರು : ರಾಜ್ಯದ ಜನರ ದಾರಿ ತಪ್ಪಿಸಲು ರಾಜ್ಯ ಸರ್ಕಾರ ಹುಲಿಯುಗುರು ಎಂಬ ಸದಾರಮೆ ನಾಟಕ ಮಾಡುತ್ತಿದ್ದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಫೇಸ್ ಬುಕ್ ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಜನರ ದಾರಿ ತಪ್ಪಿಸಲು ಕಾಂಗ್ರೆಸ್ಸಿಗರು ಹುಲಿಯ ಉಗುರಿನ ನಾಟಕ ಮಾಡುತ್ತಿದ್ದಾರೆ. ಐಟಿ ದಾಳಿಯಲ್ಲಿ ಪತ್ತೆಯಾದ ಕೋಟ್ಯಾಂತರ ಹಣದ ಚರ್ಚೆಯ ದಾರಿ ತಪ್ಪಿಸಿ, ಜನರ ಆಕ್ರೋಶಕ್ಕೆ ವಿರಾಮ ಹಾಕುವ ನಾಟಕ ಇದು ಎಂದಿದ್ದಾರೆ. ರಾಜ್ಯ ಸರ್ಕಾರದ ಕಮಿಷನ್ ಕಲೆಕ್ಟರ್ (CM)ಡೆಪ್ಯೂಟಿ ಕಮಿಷನ್ ಕಲೆಕ್ಟರ್ (DCM) ಅವರ ಹುಲಿ ಉಗುರು ನಾಟಕ ಇದು ಅಷ್ಟೇ ಅಂದಿದ್ದಾರೆ.

ಜನರು ನೂರಾರು ವರ್ಷಗಳಿಂದ ಹುಲಿಯುಗುರನ್ನ ಆಭರಣವಾಗಿ ಧರಿಸಿದ್ದಾರೆ, ಅದು ಇಲಾಖೆಗೆ ಕಾಣದ್ದೇನು ಅಲ್ಲ. ಈಗ ಸರ್ಕಾರದ ವೈಫಲ್ಯ, ಬೋಗಸ್ ಭರವಸೆಗಳಿಗೆ ಜನ ಆಕ್ರೋಶಿತರಾಗಿದ್ದಾರೆ. ರೈತರಿಗೆ ವಿದ್ಯುತ್ ಪೂರೈಸ್ತಿಲ್ಲ, ಕತ್ತಲೆ ಭಾಗ್ಯ, ಬರ ಪರಿಸ್ಥಿತಿ ನಿರ್ವಹಣೆ ವೈಫಲ್ಯ. ಶಾಸಕರು ಬಂಡಾಯದ ಬಸ್ ಹತ್ತುತ್ತಿರುವ ಆತಂಕ ಮತ್ತು ಇವೆಲ್ಲಕ್ಕಿಂತ ಮುಖ್ಯವಾಗಿ ಪಂಚ ರಾಜ್ಯ ಚುನಾವಣೆಗೆ ನಡೆಸಿದ ಕಲೆಕ್ಷನ್ ಐಟಿ ಇಲಾಖೆ ಪಾಲಾಗಿ ಸರ್ಕಾರಕ್ಕೆ ಜನರ ಎದುರು ತಲೆಯೆತ್ತಿ ನಡೆಯಲಾಗ್ತಿಲ್ಲ ಎನ್ನುವ ಕಾರಣಕ್ಕೆ ಹುಲಿಯುಗುರು ಎಂಬ ಸದಾರಮೆ ನಾಟಕ ಮಾಡುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ.

ಒಮ್ಮೆ ನಿಮ್ಮ ಮಂತ್ರಿ ಮಂಡಲದ ಒಳಗೆ ಇಣುಕಿ ನೋಡಿ ಕಾಡು ಪ್ರಾಣಿ ಬಂಧನದಲ್ಲಿರಿಸಿ ಹತ್ಯೆ ಮಾಡಿದವರು ಸಿಕ್ಕಿಯಾರು ಎಂದ ಅವರು ಅದನ್ನು ಬಿಟ್ಟು ಹುಲಿ ಉಗುರು ಧರಿಸಿದ್ದಾರೆ ಎಂಬ ಕಾರಣಕ್ಕೆ ಕ್ರಮ ಕೈಗೊಳ್ಳಲು ಹೊರಟಿರುವುದು ಅದರಲ್ಲೂ ಜನ ಸಾಮಾನ್ಯರಿಗೆ FSL ವರದಿ ಬರುವುದಕ್ಕೆ ಮುಂಚೆಯೇ ಬಂಧನ, ಇನ್ನು ಸೆಲೆಬ್ರಿಟಿಗಳಿಗೆ ನೋಟಿಸ್… ಇದೆಲ್ಲವೂ ಈ ನಾಟಕದ ಭಾಗವಲ್ಲವೇ ? ಇದು ನಿಮ್ಮ ಸರಕಾರದ ಪ್ರಾಮಾಣಿಕತೆಯ ಬಗ್ಗೆ ಸಂಶಯ ಮೂಡಿಸುವುದಿಲ್ಲವೇ ? ಎಂದು ತಮ್ಮ ಫೇಸ್ ಬುಕ್ ಮೂಲಕ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!