ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾಲಿಷ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ : ಬಿ.ಎಂ. ಸಂದೀಪ್
1 min readಚಿಕ್ಕಮಗಳೂರು : ಮಾಜಿ ಸಚಿವ ಸಿ ಟಿ ರವಿ ಹಾಗೂ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾಲಿಷ ಹೇಳಿಕೆಗಳನ್ನು ನೀಡಿ ಸರ್ಕಾರದ ವಿರುದ್ಧ ಕೆಟ್ಟ ಅಭಿಪ್ರಾಯಗಳನ್ನು ಮೂಡಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಆರೋಪಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿನ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 5 ತಿಂಗಳಾಗಿದೆ ನಿರಂತರವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಜನರ ಸಮಸ್ಯೆಯನ್ನು ಆಲಿಸುವುದು, ಜನರಿಗೆ ಬೇಕಾದ ಕಾರ್ಯಕ್ರಮಗಳನ್ನು ಮಾಡುವುದು, ಜನರ ಕಣ್ಣೀರನ್ನು ಒರೆಸುವಂತಹ ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ನುಡಿದಂತೆ ನಡೆದಿರುವ ಸರ್ಕಾರ ಎಂದರೆ ಅದು ಸಿದ್ದರಾಮಯ್ಯ ಅವರ ಸರ್ಕಾರ ಎಂದ ಅವರು ಮಾಜಿ ಸಚಿವ ಸಿ ಟಿ ರವಿ ಹಾಗೂ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸರ್ಕಾರದ ವಿರುದ್ಧ ಬಾಲಿಷ ಹೇಳಿಕೆಗಳನ್ನು ನೀಡಿ ಸರ್ಕಾರದ ವಿರುದ್ಧ ಕೆಟ್ಟ ಅಭಿಪ್ರಾಯಗಳನ್ನು ಮೂಡಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಿಟಿ ರವಿ ಅವರೇ ನೀವು ಹೇಳುತ್ತಿರುವ ನಕಾರಾತ್ಮಕ ಹೇಳಿಕೆಗಳು ನೋಡಿ.. ಜನಸಾಮಾನ್ಯರು ನಿಮ್ಮ ಅಹಂಕಾರದ ಪರಮಾವಧಿ ನೆತ್ತಿಗೇರಿದೆ ಎಂದು ತಿಳಿದುಕೊಂಡು ನಿಮ್ಮನ್ನ ಮನೆಗೆ ಕಳಿಸಿದ್ದಾರೆ. ನೀವು ಸೋತ ನಂತರ ಆತ್ಮವಲೋಕ ಮಾಡಿಕೊಳ್ಳಬೇಕಾಗುತ್ತದೆ. ನನ್ನ ಸೋಲಿಗೆ ಕಾರಣ ಏನು? ಎಲ್ಲಿ ಬೇಡವಾದ ವಿಚಾರಗಳನ್ನ ಮಾತನಾಡಿದ್ದೇನೆ? ಯಾಕೆ ಜನ ನನ್ನನ್ನ ತಿರಸ್ಕಾರ ಮಾಡಿದ್ದಾರೆ? ಎಂದು ಅದನ್ನು ಬಿಟ್ಟು ಸರ್ಕಾರದ ವಿರುದ್ಧ ಬಾಲಿಷ ಹೇಳಕೆಗಳನ್ನು ನೀಡುವುದರ ಮೂಲಕ ಕೆಟ್ಟ ಸಂಸ್ಕೃತಿಯನ್ನು ಬಿಂಬಿಸುತ್ತಿದ್ದೀರಿ ಎಂದರು.
ಕೇಂದ್ರ ಬಿಜೆಪಿ ಸರ್ಕಾರದ ಕೆಟ್ಟ ಆಡಳಿತದ ಪರಿಣಾಮ ಇಂದು ನಿರುದ್ಯೋಗ, ಬೆಲೆ ಏರಿಕೆ ಇಂದ ಬಳಲುತ್ತಿರುವಂತಹ ಮಹಿಳೆಯರಿಗೆ, ಮಧ್ಯಮ ವರ್ಗದವರಿಗೆ, ಬಡವರಿಗೆ ಯುವಕರಿಗೆ ಆ ಕಷ್ಟದಿಂದ ಹೊರ ತರುವ ಉದ್ದೇಶದಿಂದ ಈ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ ಎಂದರು.
ನೀವು ಈ ರೀತಿಯ ಹೇಳಿಕೆಗಳನ್ನು ನಮ್ಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ವಿರುದ್ಧ ಹೇಳುವುದು ಅದು ನೀವು ಆಕಾಶ ನೋಡಿ ಉಗಿದುಕೊಂಡಂತೆ ಆಗುತ್ತದೆ. ಆದ್ದರಿಂದ ನೀವು ಆಕಾಶ ನೋಡಿ ಉಗಿಯುವುದನ್ನು ನಿಲ್ಲಿಸಿ ಇಲ್ಲದಿದ್ದರೆ ಅದು ನಿಮ್ಮ ಮುಖದ ಮೇಲೆಯೇ ಬೀಳುತ್ತದೆ ಇದೇ ರೀತಿಯ ಬಾಲಿಷ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯ ಮೂಲಕ ಉತ್ತರ ಕೊಡುತ್ತೇವೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g