ವಿದ್ಯಾರ್ಥಿಗಳುಉನ್ನತ ವ್ಯಾಸಂಗ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು–ಮಹೇಂದ್ರ ಮೆನ್ನೋತ್
1 min readಚಿಕ್ಕಮಗಳೂರು – ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಸಮಾಜಕ್ಕೆ ಮಾದರಿಯಾಗಬೇಕೆಂದು ಬೆಂಗಳೂರಿನ ದಾನಿಗಳಾದ ಮಹೇಂದ್ರ ಮೊನ್ನೋತ್ ತಿಳಿಸಿದರು.
ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೈನ್ ಸಂಘ ಮತ್ತು ಮಹಿಳಾ ಮಂಡಳಿ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಮಾಡನಾಡಿ ಮಕ್ಕಳು ದೇಶದ ಭವ್ಯ ಭವಿಷ್ಯದ ರೂವಾರಿಗಳು, ದೇಶದಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸುವಉತ್ತಮ ಪ್ರಜೆಗಳಾಗಬೇಕೆಂದು ತಿಳಿಸಿದರು.
ಪ್ರತಿ ವರ್ಷ ನಾನು ರಾಜ್ಯದ ಕೆಲವು ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡು ಚಿಕ್ಕಮಗಳೂರಿನ ನಗರ ಮತ್ತುಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳಿಗೆ ಅನುಕೂಲವಾಗಲೆಂದು ಕಳೆದ ಹಲವು ವರ್ಷಗಳಿಂದ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದ್ದೇನೆ, ಮಕ್ಕಳು ಉನ್ನತ ವ್ಯಾಸಂಗ ಮಾಡಿ ಸಮಾಜಕ್ಕೆ ಮಾದರಿಯಾಗುವುದರಜೊತೆಗೆ ಗೋವುಗಳನ್ನು ರಕ್ಷಿಸಬೇಕೆಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಮಾತನಾಡಿ ಮಹೇಂದ್ರ ಮೆನ್ನೋತ್ರವರು ನಮ ್ಮತಾಲ್ಲೂಕಿಗೆ ಪ್ರತಿ ವರ್ಷವು ಬೆಂಗಳೂರಿನ ಮಾರುತಿ ಮೆಡಿಕಲ್ ಮಾಲೀಕರು ನೋಟ್ ಪುಸ್ತಕಗಳನ್ನು ನೀಡುತ್ತಿದ್ದಾರೆ, ಇದುವರೆಗೂ 1.76.400 ನೋಟ್ ಪುಸ್ತಕಗಳನ್ನು ವಿತರಿಸಿದ್ದಾರೆ, ಇದರ ಮೌಲ್ಯ ಸುಮಾರು 22 ಲಕ್ಷ ರೂಗಳಿಗು ಹೆಚ್ಚು, ಇದೇರೀತಿಯಲ್ಲಿಅವರ ಸಮಾಜ ಸೇವೆ ಕೆಲಸಗಳು ಮುಂದುವರೆಯಲಿ ಎಂದರು.
ಜೈನ್ ಸಂಘದ ಅಧ್ಯಕ್ಷ ಕಾಂತಿಲಾಲ್ ಮಾತನಾಡಿ ನಮ್ಮ ಸಮಾಜದ ಮುಖಂಡರಾದ ಮಹೇಂದ್ರರವರು ಗೋವುಗಳ ರಕ್ಷಣೆ ಮತ್ತು ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆಎಂದರು.
ಜೈನ್ ಮಹಿಳಾ ಸಂಘದ ಸ್ವಪ್ನ ಜೈನ್ ಮಾತನಾಡಿ ನಮ್ಮ ಸಮಾಜದವರು ಅನೇಕ ಸಮಾಜಮುಖಿ ಕೆಲಸಗಳನ್ನು ಕೈಗೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಹಿಳಾ ಸಂಘದ ಊರ್ಮಿಳಾ ಜೈನ್, ಗೀತಾಸಿಪಾನಿ, ಅನುಪಮಾ ಲೂನಾವತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g