May 11, 2024

MALNAD TV

HEART OF COFFEE CITY

ಕುವೆಂಪು ವಿಶ್ವವಿದ್ಯಾಲಯದ ವಿರುದ್ಧ ಜಿಲ್ಲಾದ್ಯಂತ ಬೀದಿಗಳಿದ ವಿದ್ಯಾರ್ಥಿಗಳು

1 min read

2022-23ರ ಶೈಕ್ಷಣಿಕ ವರ್ಷದ ಮಧ್ಯಂತರ ವೇಳಾಪಟ್ಟಿಯನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಕುವೆಂಪು ವಿಶ್ವವಿದ್ಯಾಲಯದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ನಗರದಲ್ಲಿ ಎನ್.ಎಸ್.ಯು.ಐ ವಿದ್ಯಾರ್ಥಿ ಘಟಕ ಪ್ರತಿಭಟನೆ ನಡೆಸಿದರೆ, ಕಡೂರಿನಲ್ಲಿ ಎಬಿವಿಪಿ ವಿದ್ಯಾರ್ಥಿ ಘಟಕ ಪ್ರತಿಭಟನೆ ನಡೆಸಿದರು. ಇನ್ನೂ ಕಳಸ ಪಟ್ಟಣದಲ್ಲೂ ಕೂಡ ನೂರಾರು ವಿದ್ಯಾರ್ಥಿಗಳು ಕುವೆಂಪು ವಿವಿ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯದ ಇತರ ವಿವಿಗಳಲ್ಲಿ ಏಪ್ರಿಲ್‍ಗೆ ತರಗತಿಗಳು ಶುರುವಾಗಿದ್ದರೆ, ಕುವೆಂಪು ವಿವಿಯಲ್ಲಿ ತರಗತಿಗಳು ಶುರುವಾಗಿದ್ದೇ ಜೂನ್ 20ರ ಬಳಿಕ. ಆದರೆ, ಇದೀಗ ರಾಜ್ಯದ ಇತರ ವಿವಿಗಳಂತೆ ಕುವೆಂಪು ವಿವಿ ಕೂಡ ಆಗಸ್ಟ್ 30ಕ್ಕೆ ಮೊದಲ ಸೆಮಿಸ್ಟರ್‍ನ್ನ ಕೊನೆಗೊಳಿಸುವಂತೆ ಸೂಚಿಸಿದೆ.

ಆದರೆ, ಇನ್ನೂ ಕೂಡ ತರಗತಿಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಏಕಾಏಕಿ ಈ ರೀತಿಯ ಕ್ರಮಕ್ಕೆ ಮುಂದಾಗಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪದವಿ ವಿದ್ಯಾರ್ಥಿಗಳು ಕುವೆಂಪು ವಿವಿಯ ಕುಲಪತಿ ವಿರುದ್ಧ ಕೆಂಡಮಂಡಲರಾಗಿದ್ದಾರೆ. ನಮ್ಮ ಶೈಕ್ಷಣಿಕ ಭವಿಷ್ಯದ ಜೊತೆ ಚೆಲ್ಲಾಟ ಆಡಬೇಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ಹೊರಡಿಸಿರುವ ವೇಳಾಪಟ್ಟಿಯನ್ನು ಕೂಡಲೇ ಬದಲಾಯಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕುವೆಂಪು ವಿವಿ ಪರೀಕ್ಷಾ ವೇಳಾಪಟ್ಟಿಯನ್ನ ಕೂಡಲೇ ಬದಲಿಸಿದಿದ್ದರೆ ಹೋರಾಟವನ್ನ ಮತ್ತಷ್ಟು ತೀಕ್ಷ್ಣಗೊಳಿಸುವುದಾಗಿ ಎಚ್ಚರಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!