ಯಶಸ್ವಿಯಾದ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಮುಷ್ಕರ : ಪೊಲೀಸ್ ರಕ್ಷಣೆಯಲ್ಲಿ ಬೀದಿಗಿಳಿದ ಬಸ್
1 min readಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ. ಸಿಬ್ಬಂಧಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿರುವ ಮಾಡು ಇಲ್ಲವೇ ಮಡಿ ಎಂಬ ಧ್ಯೇಯ ವಾಕ್ಯದೊಂದಿಗೆ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರದಿಂದ ಬೆಳ್ಳಿಗಿನ ಸಮಯದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸ್ಗಳು ರಸ್ತೆಗೆ ಇಳಿಯಲಿಲ್ಲ. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ಗಳೆ ಇಲ್ಲದೆ ಇರುವುದಿಂದ ಬಿಕೊ ಎನ್ನುತಿತ್ತು. ಬಸ್ ನಿಲ್ದಾಣದಲ್ಲಿ ದೂರದೂರಿನಿಂದ ಬಂದ ಪ್ರಯಾಣಿಕರು ಬಸ್ಗಾಗಿ ಕಾಯುತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೆ.ಎಸ್.ಆರ್.ಟಿ.ಸಿ. ಸಿಬ್ಬಂಧಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ರಾಜ್ಯಾಧ್ಯಂತ ಯಶಸ್ವಿಯಾಗಿದೆ. ಮುಷ್ಕರ ಆರಂಭಗೊAಡಿರುವ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಕೆ.ಎಸ್ಆರ್.ಟಿ.ಸಿ ಬಸ್ಸ್ಗಳು ಪೊಲೀಸರ ಸರ್ಪಗಾವಲಿನಲ್ಲಿ ರಸ್ತೆಗಿಳಿದಿವೆ. ಕಡೂರಿನಿಂದ ಚಿಕ್ಕಮಗಳೂರಿಗೆ ಹಾಗೂ ಬೇಲೂರಿನಿಂದ ಹಳೇಬೀಡಿಗೆ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ರಸ್ತೆಗೆ ಇಳಿಯಿತು. ಪರಿಸ್ಥಿತಿ ನೋಡಿ ಮತ್ತಷ್ಟು ಬಸ್ಸ್ ಬಿಡುವ ನಿರೀಕ್ಷೆಯಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g