ಪಕ್ಷ ಅವಕಾಶ ಕೊಟ್ಟರೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದ ಸುಧಾಕರ ಶೆಟ್ಟಿ
1 min read
ಪಕ್ಷ ಅವಕಾಶ ಕೊಟ್ಟರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಮನದಾಳ ಬಿಚ್ಚಿಟ್ಟಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚುತ್ತಿವೆ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಚರ್ಚೆ ಬೆನ್ನಲ್ಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಾನೂ ಸಿದ್ದ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಹೇಳಿದ್ದಾರೆ. ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧೆಗೆ ಸಿದ್ದ ಎಂದ ಸುಧಾಕರ ಶೆಟ್ಟಿ ನೀವೆ ನಿಲ್ಲಿ ಎಂದರೆ ಖಂಡಿತ ಸ್ಪರ್ಧಿಸಿ ಗೆದ್ದು ತೋರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೆಡಿಎಸ್ ಅಭದ್ರವಾಗಿತ್ತು ಇದೀಗ ಪಕ್ಷ ಸಂಘಟನೆಗೆ ನಾವು ಮುಂದಾಗಿದ್ದೇವೆ ಎಂದು ತಿಳಿಸಿದ ಅವರು ತಳಮಟ್ಟದ ಕಾರ್ಯಕರ್ತರಲ್ಲಿ ಬಿಜೆಪಿ ಜೊತೆಗಿನ ಹೊಂದಾಣಿಕೆ ಬಗ್ಗೆ ಗೊಂದಲ ಇರುವುದು ಸ್ವಾಭಾವಿಕ ಶೀಘ್ರದಲ್ಲೇ ಎಲ್ಲದಕ್ಕೂ ತೆರೆ ಬೀಳಲಿದೆ ಎಂದರು.
ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲು ಪಕ್ಷದ ಸಭೆಗಳನ್ನು ನಡೆಸುತ್ತಿದ್ದು ನಾಳೆ ನಡೆಯಲಿರುವ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಸುಧಾಕರ ಶೆಟ್ಟಿ ತಿಳಿಸಿದರು. ರಾಜ್ಯ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಕಾಂಗ್ರೆಸ್ ಮುಖಂಡರಲ್ಲೇ ತಲೆಯಿಂದ ಬುಡದವರೆಗೂ ಡೌಟ್ ಗಳಿದ್ದು, ಗ್ಯಾರೆಂಟಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಅವರಿಗೆ ಗ್ಯಾರೆಂಟಿ ಇದೆ ಎಂದು ಸುಧಾಕರ ಶೆಟ್ಟಿ ಹೇಳಿದರು. ಶೃಂಗೇರಿ ಬಿಜೆಪಿ ಮುಖಂಡ ಅರೆಕುಡಿಗೆ ಶಿವು ಹಾಗೂ ಮೂಡಿಗೆರೆ ಕಾಂಗ್ರೆಸ್ ಮುಖಂಡರ ಹೂವಪ್ಪ ಸೇರಿದಂತೆ ಹಲವರು ಜೆಡಿಎಸ್ ಸೇರ್ಪಡೆಯಾದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g