May 17, 2024

MALNAD TV

HEART OF COFFEE CITY

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಟಿ.ರಾಜಶೇಖರ್ ಆಯ್ಕೆ

1 min read

ಚಿಕ್ಕಮಗಳೂರು: 2021-2024 ನೇ ಸಾಲಿಗೆ ನಡೆದ ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಟಿ.ರಾಜಶೇಖರ್, ಉಪಾಧ್ಯಕ್ಷರಾಗಿ ಎನ್.ಲಕ್ಷ್ಮಣ್‍ಗೌಡ, ಹಾಗೂ ಗೌರವ ಕಾರ್ಯದರ್ಶಿಯಾಗಿ ಎಂ.ಸಿ. ಪ್ರಕಾಶ್ ಆಯ್ಕೆಯಾದರು.
ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಸಂಘದ ನಿರ್ದೇಶಕರುಗಳು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅಭಿನಂದಿಸಿದರು.
ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಟಿ.ರಾಜಶೇಖರ್ ಮಾತನಾಡಿ ಒಕ್ಕಲಿಗ ಸಮುದಾಯವು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಸಂಘವು ಶ್ರಮಿಸಲಿದೆ. ಸಂಘದ ಹಣ ದುರುಪಯೋಗವಾಗದಂತೆ, ಜತೆಗೆ ರಾಜಕೀಯ ಬೆರೆಸದೆ ಹಿರಿಯರು, ಸದಸ್ಯರ ಸಲಹೆ ಮಾರ್ಗದರ್ಶನ ಪಡೆದು ಸಂಘದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮನೆ ಮನೆಗೆ ತಲುಪಿಸುವ ಆಶಯ ಹೊಂದಲಾಗಿದೆ ಎಂದು ತಿಳಿಸಿದರು.

ಕೋವಿಡ್ ತುರ್ತು ಸಂದರ್ಭದಲ್ಲಿ ಸಂಘದ ವತಿಯಿಂದ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಶಾಲೆ, ಸಮುದಾಯ ಭವನದ ಅಭಿವೃದ್ಧಿ ಜತೆಗೆ ಸಂಘಕ್ಕೆ ಹಾಗೂ ಸಮುದಾಯಕ್ಕೆ ಯಾವುದೇ ರೀತಿಯ ಧಕ್ಕೆ ಬಾರದಂತೆ ನಡೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯ ವಿವಿಧ ಭಾಗದ ನಿರ್ದೇಶಕರುಗಳು ಶಾಂತಿಯುತವಾಗಿ ಚುನಾವಣೆ ನಡೆಸುವ ಮೂಲಕ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಕಾರ್ಯದರ್ಶಿಯನ್ನು ಆಯ್ಕೆ ಮಾಡಿರುವುದಕ್ಕೆ ಅಭಾರಿ ಎಂದು ಸ್ಮರಿಸಿದರು.

ಗೌರವ ಕಾರ್ಯದರ್ಶಿ ಎಂ.ಸಿ. ಪ್ರಕಾಶ್ ಮಾತನಾಡಿ ಇರುವ ಅಧಿಕಾರವಧಿಯಲ್ಲಿ ಸಂಘದ ಸರ್ವತೋಮುಖ ಏಳಿಗೆಗೆ ಶ್ರಮಿಸಲಾಗುವುದು, ಮುಖ್ಯವಾಗಿ ಶೈಕ್ಷಣಿಕ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ, ಸಮುದಾಯದಲ್ಲಿ ಹಿಂದುಳಿದ ದುರ್ಬಲ ವರ್ಗವನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡಲಾಗುವುದು ಎಂದರು.
ನೂತನ ಉಪಾಧ್ಯಕ್ಷ ಎನ್.ಲಕ್ಷ್ಮಣ್‍ಗೌಡ, ಮಾತನಾಡಿ ಸಂಘದ ಎಲ್ಲಾ ನಿರ್ದೇಶಕರುಗಳು, ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಉತ್ತಮ ಆಡಳಿತವನ್ನು ನೀಡಲಾಗುವುದು, ಸಂಘಕ್ಕೆ ಯಾವುದೇ ಕಪ್ಪು ಚುಕ್ಕೆಬಾರದಂತೆ ನಡೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

 

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಕೆ.ಎ. ರಾಜೇಗೌಡ, ಮಾಜಿ ಗೌರವ ಕಾರ್ಯದರ್ಶಿ ಐ.ಎಸ್.ಉಮೇಶ್‍ಚಂದ್ರ,ಉಪಾಧ್ಯಕ್ಷಮನೋಜ್‍ನಿರ್ದೇಶಕರುಗಳಾದಕೆ.ಬಿ.ಅನಂತೇಗೌಡ,ಎಂ.ಎಸ್.ಪ್ರದೀಪ್‍ಕುಮಾರ್, ಹೆಚ್.ಎನ್.ಕೃಷ್ಣೇಗೌಡ, ಕೆ.ಕೆ.ಮನುಕುಮಾರ್, ಹೆಚ್.ಎಂ.ಶ್ಯಾಮ್. ಎಸ್.ಎಸ್. ಶಾಂತಕುಮಾರ್. ಕುಸುಮ, ಸುಜಿತ್, ಅನುಪಮ, ಯು.ಪಿ. ಮನುಕುಮಾರ್, ಎಂ.ಎಸ್.ವಿಕ್ರಾಂತ್, ಹೆಚ್.ಎನ್,ಶ್ರೀಧರ್, ಟಿ.ಡಿ. ಮಲ್ಲೇಶ್, ಜಿ.ಹೆಚ್, ದಿನೇಶ್, ವೈ.ಎಸ್ ಪ್ರಕಾಶ್‍ಹೆಗ್ಡೆ, ಬಿ.ಎನ್, ಗಿರೀಶ್, ಕೆ.ವಿ.ರವಿಕುಮಾರ್, ಕೆ.ಪಿ ಪೃಥ್ವಿರಾಜ್, ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!