May 15, 2024

MALNAD TV

HEART OF COFFEE CITY

ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

1 min read

ಚಿಕ್ಕಮಗಳೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಬಸವನಹಳ್ಳಿ ಶಂಕರಮಠದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ದಿವ್ಯ ಜ್ಯೋತಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಯಶೋಧಮ್ಮ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂಜೀವಿನಿ ಆಸ್ಪತ್ರೆಯ ಡಾ. ಸೌಮ್ಯಸುನಿಲ್ ಸುಸ್ಥಿರ ಆರೋಗ್ಯದಲ್ಲಿ ಮಹಿಳೆಯ ಪಾತ್ರದ ಕುರಿತು ವಿವರವಾದ ಮಾಹಿತಿ ನೀಡಿದರು, ಅಲ್ಲದೆ ಶಿಕ್ಷಣ ಜ್ಞಾನವನ್ನು ಪಡೆದುಕೊಂಡರೆ ಸಮಾಜದಲ್ಲಿ ನಮ್ಮನ್ನು ನಾವು ಹೇಗೆ ಗುರುತಿಸಿಕೊಳ್ಳಬಹುದು ಎಂಬುದನ್ನು ಮಹಿಳೆಯರಿಗೆ ತಿಳಿದರು. ಅಡ್ವಕೇಟ್ ಅರುಂಧತಿ ಹೆಚ್. ಎನ್ ಮಹಿಳಾ ಸಬಲೀಕರಣ ಮತ್ತು ಕಾನೂನು ವಿಚಾರದ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಮಹಿಳೆಯರಿಗಾಗಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಕ್ತರಹಳ್ಳಿ,ದಿವ್ಯ ಜ್ಯೋತಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷ ಪ್ರಕಾಶ್ ರಾವ್, ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ನ ಜಿಲ್ಲಾ ನಿರ್ದೇಶಕ ಇಂಪಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!