ಬಿ.ಎಸ್. ಯಡಿಯೂರಪ್ಪ ಪರ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಬ್ಯಾಟಿಂಗ್
1 min readಚಿಕ್ಕಮಗಳೂರು : ಪಕ್ಷದ ಹಿತದೃಷ್ಟಿಯಿಂದ ಇನ್ನು 2 ವರ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಮುಂದುವರೆಸಬೇಕು ಎಂದು ಸಿ.ಎಂ. ಯಡಿಯೂರಪ್ಪ ಪರ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಬ್ಯಾಂಟಿಗ್ ಬೀಸಿದ್ದಾರೆ.
26 ರಂದು ರಾಷ್ಟ್ರೀಯ ನಾಯಕರು ಸೂಚನೆ ಕೊಡ್ತಾರೆ ಅಂತಾ ಸಿಎಂ ಹೇಳಿದ್ದಾರೆ. ಸಿ.ಎಂ. ರಾಜೀನಾಮೆ ಕೊಡ್ತೇನೆ ಅಂತಾ ಎಲ್ಲೂ ಹೇಳಿಲ್ಲ. ಇದುವರೆಗೂ ಹೈ ಕಮಾಂಡ್ ಯಾವುದೇ ಸೂಚನೆ ಕೊಟ್ಟಿಲ್ಲ. ಯಾಕೆ ಈ ರೀತಿ ಗೊಂದಲ ಸೃಷ್ಟಿಯಾಯ್ತು ಗೊತ್ತಿಲ್ಲ. ನಾಯಕತ್ವ ಬದಲಾವಣೆ ಚರ್ಚೆ ಯಾಕೆ ಮಾಡ್ತಿದ್ದಾರೋ ಅರ್ಥ ಆಗ್ತಿಲ್ಲ. ಪಕ್ಷದ ನಿರ್ಧಾರಕ್ಕೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಯಡಿಯೂರಪ್ಪ ಈ ವಯಸ್ಸಿನಲ್ಲಿಯೂ ಉತ್ತಮ ಆಡಳಿತ ನೀಡಿದ್ದಾರೆ. ಎರಡು ವರ್ಷಗಳ ನಂತರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು ಅಂದ್ರೆ ಬಿಎಸ್ ವೈ ಮುಂದುವರೆಯಬೇಕು ಅನ್ನೋದು ನನ್ನ ಭಾವನೆ. ಹೈಕಮಾಂಡ್ ನಿರ್ಧಾರ ಗೌರವಿಸಬೇಕು. ಭೋಜನ ಕೂಟ ರದ್ದಾಗಿರುವ ಬಗ್ಗೆ ಮಾಹಿತಿ ಇಲ್ಲ. ನಾನು 25 ರಂದು ಔತಣಕೂಟಕ್ಕೆ ಹೋಗ್ತೇನೆ ಎಂದು ತರೀಕರೆ ಶಾಸಕ ಡಿ.ಎಸ್. ಸುರೇಶ್ ಹೇಳಿಕೆ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g