ಬಿಜೆಪಿಗೆ ಮತ ನೀಡಿದವರಿಗೆ ಕೃತಜ್ಞತೆಗಳು : ವರಸಿದ್ಧಿ
1 min readಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತನೀಡಿದ ಮತದಾರರಿಗೆ ಭಾರತೀಯ ಜನತಾ ಪಾರ್ಟಿ ಕೃತಜ್ಞತೆ ಸಲ್ಲಿಸುತ್ತದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ನಗರಸಭಾ ಸದಸ್ಯರಾದ ವರಸಿದ್ಧಿ ವೇಣುಗೋಪಾಲ್ ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರಸಭೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ತರುವಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿಯವರು, ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ, ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಸಿ.ಕಲ್ಮರುಡಪ್ಪರವರು, ರಾಜ್ಯ ಸರ್ಕಾರದ ಸಚಿವರುಗಳಿಗೆ, ಉಪಸಭಾಪತಿಗಳಾದ ಶ್ರೀ ಎಂ.ಕೆ.ಪ್ರಾಣೇಶ್ರವರಿಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಡಿ.ಎನ್.ಜೀವರಾಜ್ರವರಿಗೆ, ಶಾಸಕರಾದ ಶ್ರೀ ಬೆಳ್ಳಿ ಪ್ರಕಾಶ್, ಶ್ರೀ ಡಿ.ಎಸ್.ಸುರೇಶ್, ಶ್ರೀ ಎಂ.ಪಿ.ಕುಮಾರಸ್ವಾಮಿ ಹಾಗೂ ಹಾಸನದ ಶಾಸಕರಾದ ಶ್ರೀ ಪ್ರೀತಮ್ ಗೌಡ ಮತ್ತು ರಾಜ್ಯದ ಮುಖಂಡರು ಹಾಗೂ ಎಲ್ಲಾ ಬಿಜೆಪಿಯ ಎಲ್ಲಾ ಮುಖಂಡರು, ಪದಾಧಿಕಾರಿಗಳಿಗೆ, ಪರೋಕ್ಷವಾಗಿ ಪ್ರತ್ಯಕ್ಷವಾಗಿ ಭಾಗವಹಿಸಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿದವರಿಗೆ ಬಿಜೆಪಿ ಧನ್ಯವಾದವನ್ನು ಸಲ್ಲಿಸುತ್ತದೆ.
ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ ರಾಷ್ಟ್ರೀಯಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ಪ್ರಯತ್ನದಿಂದ ಸುಮಾರು ಮೂರೂವರೆ ಸಾವಿರ ಕೋಟಿಯಷ್ಟು ವಿವಿಧ ಕಾಮಗಾರಿಗೆ ಅನುದಾನ ತಂದು ಅಭಿವೃದ್ಧಿ ಪಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಮತ್ತು ಈಗಾಗಲೇ ನಗರದ ವ್ಯಾಪ್ತಿಯಲ್ಲಿ ವಿವಿಧ ರಸ್ತೆಗಳಲ್ಲಿ ಡಾಂಬರೀಕರಣ ಮುಕ್ತಾಯವಾಗಿದ್ದು, ಇನ್ನೂ ಕೆಲವು ರಸ್ತೆಗಳು ಡಾಂಬರೀಕರಣವಾಗಲು ಬಾಕಿಯಿದ್ದು ಇನ್ನು ಕೆಲವೇ ದಿನಗಳಲ್ಲಿ ಚಿಕ್ಕಮಗಳೂರು ನಗರದ ಸಂಪೂರ್ಣ ಡಾಂಬರೀಕರಣ ಮುಕ್ತಾಯವಾಗಲಿದೆ ಎಂದರು.
ಕಾಂಗ್ರೆಸ್ ಚುನಾವಣೆಯಲ್ಲಿ ಶಾಸಕ ಸಿ.ಟಿ.ರವಿಯವರು ಮತ್ತು ನಗರಸಭೆಯಲ್ಲಿ ಯಾವುದೇ ಕಾಮಗಾರಿ ಆಗಿಲ್ಲ, ಅಭಿವೃದ್ಧಿ ಸುಳ್ಳು ಎಂದು ಅಪಪ್ರಚಾರ ಮಾಡುತ್ತಾ ಬಂದರು. ಅದಕ್ಕೆ ನಗರದ ಮತದಾರರು ಕಿವಿಗೊಡದೆ ಮತ್ತೊಮ್ಮೆ ನಗರಸಭೆಯನ್ನು ಬಿಜೆಪಿಯ ಅಧಿಕಾರಕ್ಕೆ ತರುವಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಅಪಪ್ರಚಾರಕ್ಕೆ ಮತದಾರರು ಕಿವಿಗೊಡದೆ ಬಿಜೆಪಿಗೆ ಮತದಾನ ಮಾಡಿದ್ದಾರೆ.
ನಗರಸಭೆಯನ್ನು ಜನಸ್ನೇಹಿಯಾಗಿ ಮತ್ತು ಜನರಿಗೆ ಹತ್ತಿರವಾಗುವಂತ ಅಭಿವೃದ್ಧಿ ಕಾರ್ಯದಲ್ಲಿ ನೂತನ ಸದಸ್ಯರು ತೊಡಗಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g