May 14, 2024

MALNAD TV

HEART OF COFFEE CITY

ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಹೊಸ ಶಕ್ತಿಯಾಗಿ ಹೊರಹೊಮ್ಮಲಿದೆ; ಆರಗ ಜ್ಞಾನೇಂದ್ರ

1 min read

ಚಿಕ್ಕಮಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಹೊಸ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಮಾತನಾಡಿದ ಅವರು ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುಟುಂಬ ರಾಜಕಾರಣ ಎನ್ನಲು ಸಾಧ್ಯವಿಲ್ಲ, ನಮ್ಮ ಹೈಕಮಾಂಡ್ ಅವರಿಗೆ ಮಂತ್ರಿ ಸ್ಥಾನ ನೀಡಿಲ್ಲ ಬದಲಾಗಿ ಜವಾಬ್ದಾರಿ ನೀಡಿದ್ದಾರೆ ಅದಕ್ಕಾಗಿ ಹೈಕಮಾಂಡ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಲಂಕಾರಿಕ ಹುದ್ದೆ ಅಲ್ಲ, ವಿಜಯೇಂದ್ರ ಯುವಕರಾಗಿದ್ದು ಹೊಸ ಚೈತನ್ಯ ಪಕ್ಷಕ್ಕೆ ಸಿಗಲಿದೆ. ಒಳ್ಳೆಯ ಕೆಲಸ ಅವರು ಮಾಡಿಕೊಂಡು ಹೋಗುತ್ತಾರೆ. ಯಾವುದೇ ಜನರೇಷನ್ ಗ್ಯಾಪ್ ಆಗುವುದಿಲ್ಲ ಈ ಹಿಂದೆಯೂ ಯುವಕನ್ನು ರಾಜ್ಯಾಧ್ಯಕ್ಷ ಮಾಡಿದ ಉದಾಹರಣೆಗಳು ಇದೆ, ಯಾವುದೇ ಪಕ್ಷದ ಹಿರಿಯರಿಗೆ ಇದರಿಂದ ಅಸಮಾಧಾನ ಆಗುವುದಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದರು.
ವಿಜಯೇಂದ್ರ ಅವರ ಕೈಗೆ ಅಧ್ಯಕ್ಷ‌ ಸ್ಥಾನ ಕೊಟ್ಟಿದ್ದು ಸಮಯೋಚಿತ. ರಾಜ್ಯಾದ್ಯಂತ ಪ್ರವಾಸ ಮಾಡಿ ಸಾವಿರಾರು ಜನರ ಪರಿಚಯದ ವ್ಯಕ್ತಿ. ಅಷ್ಟೇ ಅಲ್ಲದೆ ಇವರಿಗೆ ಯುವಮೋರ್ಚಾ ಅಧ್ಯಕ್ಷರಾಗಿ ರಾಜ್ಯ ಉಪಾಧ್ಯಕ್ಷರಾಗಿ, ಶಾಸಕನಾಗಿ ಕೆಲಸ ಮಾಡಿದ ಅನುಭವವಿದೆ. ಬಿಜೆಪಿ ಮುಂದೆ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಹಳ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತೆ ಎಂದ ಅವರು ವಿಜಯೇಂದ್ರ ಅವರನ್ನ ಹಾರ್ದಿಕವಾಗಿ ಅಭಿನಂದಿಸುತ್ತೇನೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!