May 19, 2024

MALNAD TV

HEART OF COFFEE CITY

ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಕಂಚಿನ ಪ್ರತಿಮೆ ಅನಾವರಣ

1 min read

 ಜಿಲ್ಲಾ ಸಂಗೊಳ್ಳಿ ರಾಯಣ್ಣ ವೇದಿಕೆ ವತಿಯಿಂದ ನಗರದ ದಂಟರ ಮಕ್ಕಿ ಕೆ.ಎಂ.ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾರ್ಚ್ 23ರ ಭಾನುವಾರ ಬೆಳಿಗ್ಗೆ 11.30ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪ್ರತಿಮೆಯ ಅನಾವರಣ ಸಮಾರಂಭ ನೆರೆವೇರಿಸಲಾಗುವುದೆಂದು ಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ ಕೆ.ಎಸ್.ಪುಷ್ವರಾಜ್ ತಿಳಿಸಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ದಂಟರಮುಕ್ಕಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾರ್ಚ್ 23ರ ಭಾನುವಾರ ಬೆಳಿಗ್ಗೆ 11.30ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪ್ರತಿಮೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜು ರವರು ಉದ್ಘಾಟಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರಾದ ಸಿ.ಟಿ.ರವಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ, ಹಾಗೂ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಅಧ್ಯಕ್ಷ ಚಂದ್ರೇಗೌಡ, ಡಿ.ಎಸ್.ಚಂದ್ರೇಗೌಡ, ಭಾಗವಹಿಸಲಿದ್ದಾರೆ.ಈ ಸಮಾರಂಭಕ್ಕೆ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಜಿಲ್ಲಾ ಸಂಗೊಳ್ಳಿ ರಾಯಣ್ನ ವೇದಿಕೆ ವತಿಯಿಂದ ತಿಳಿಸಲಾಗಿದೆ
ಈ ಸಂದರ್ಭದಲ್ಲಿ ಬೆಳವಾಡಿ ರವೀಂದ್ರ ನೆಟ್ಟೆಕೆರೆಹಳ್ಳಿ ಜಯ್ಯಣ್ಣ, ಹಂಪಾಪುರ ರಾಜೀವ್, ದಂಟರಮುಕ್ಕಿ ಮೋಹನ್, ಮಣ್ಣೇನಹಳ್ಳಿ ರಾಜು ಮತ್ತಿತತರು ಉಪಸ್ಥಿತರಿದ್ದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!