May 5, 2024

MALNAD TV

HEART OF COFFEE CITY

ಜಿಂಕೆ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು, ಚಾಲಕ ಪ್ರಾಣಾಪಾಯದಿಂದ ಪಾರು

1 min read

ಕಾರಿಗೆ ಅಡ್ಡ ಬಂದ ಜಿಂಕೆಯನ್ನ ತಪ್ಪಿಸಲು ಹೋಗಿ ಐ20 ಕಾರು ಹೊಂಡಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ಹಾಗೂ ಕೊಪ್ಪ ತಾಲೂಕಿನ ಗಡಿಭಾಗದಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಕೊಪ್ಪ ತಾಲೂಕಿನ ಮಾವಿನ ಮನೆ ನಾಗರಾಜ್ ಅಪಾಯದಿಂದ ಪಾರಾಗಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಎನ್.ಆರ್.ಪುರಕ್ಕೆ ಬಂದು ಕೊಪ್ಪಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗುವಾಗ ಕಾರಿಗೆ ಅಡ್ಡ ಬಂದ ಜಿಂಕೆಯನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ, ಹೊಂಡಕ್ಕೆ ಬಿದ್ದಿದೆ. ಮಲೆನಾಡು ಭಾಗದಲ್ಲಿ ಭಾರೀ ಮಳೆ ಇಲ್ಲದಿದ್ದರೂ ಆಗಾಗ್ಗೆ ಸಾಧಾರಣ ಮಳೆ ಸುರಿಯುತ್ತಿದೆ. ಜಿಂಕೆ ತಪ್ಪಿಸಲು ಹೋಗಿ ರಸ್ತೆಯಿಂದ ಕೆಳಕ್ಕೆ ಇಳಿದ ಕಾರು ಮಳೆ ಬಂದು ಭೂಮಿ ತೇವಗೊಂಡಿದ್ದರಿಂದ ಜಾರಿ ಹೊಂಡಕ್ಕೆ ಬಿದ್ದಿದೆ.‌ ಕಾರು ಹೊಂಡಕ್ಕೆ ಬೀಳುತ್ತಿದ್ದಂತೆ ಸ್ಥಳಿಯರು ಕಾರು ಚಾಲಕ ನಾಗರಾಜ್ ಅವರನ್ನು ಕಾರಿನಿಂದ ಹೊರಗೆ ಎಳೆದು ರಕ್ಷಿಸಿದ್ದಾರೆ. ಬಳಿಕ ಕ್ರೇನ್ ಮೂಲಕ ಕಾರನ್ನ ಕೊಂಡದಿಂದ ಮೇಲಕ್ಕೆ ಎತ್ತಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಎನ್.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!