ಕಾರು ಮರಕ್ಕೆ ಡಿಕ್ಕಿ, ಮದುವೆ ನಿಶ್ಚಯವಾಗಿದ್ದ ಮೆಸ್ಕಾಂ ಜೆ.ಇ. ಸಾವು
1 min readಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನ 32 ವರ್ಷದ ಕಿರಣ್ ಹಾಗೂ 40 ವರ್ಷದ ನಾಗರಾಜ್ ಎಂದು ಗುರುತಿಸಲಾಗಿದೆ. 32 ವರ್ಷದ ಮೃತ ಕಿರಣ್ ಅಜ್ಜಂಪುರ ತಾಲೂಕಿನ ಶಿವನಿಯ ಮೆಸ್ಕಾಂನಲ್ಲಿ ಜೆ.ಇ. ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಮೂಲತ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನವರು. ಮೃತ ಕಿರಣ್ ಗೆ ಮದುವೆ ಕೂಡ ನಿಶ್ಚಯವಾಗಿದ್ದು, ಫೆಬ್ರವರಿ 8ನೇ ತಾರೀಕು ಕಿರಣ್ ಮದುವೆ ಇತ್ತು. ಆದರೆ, ಇಂದು ತರೀಕೆರೆಯಿಂದ ಶಿವನಿಗೆ ಹೋಗುವ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರು, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಧುಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಕಿರಣ್ ಜೊತೆ ಇದ್ದ ಅಜ್ಜಂಪುರ ಮೂಲದ 40 ವರ್ಷದ ನಾಗರಾಜ್ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g