May 20, 2024

MALNAD TV

HEART OF COFFEE CITY

ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಠ ನಿಲುವನ್ನು ತೆಗೆದುಕೊಂಡಿದೆ -ಟಿ.ರಾಜಶೇಖರ್

1 min read

ಚಿಕ್ಕಮಗಳೂರು-ಕಳೆದ ಹಲವಾರು ವರ್ಷಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಜನರನ್ನು ಚಿಂತೆಗೀಡು ಮಾಡಿದ್ದ ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಠ ನಿಲುವನ್ನು ತೆಗೆದುಕೊಂಡಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಟಿ.ರಾಜಶೇಖರ್ ತಿಳಿಸಿದರು.  ಅವರು ಸುದ್ದಿಗಾರರೊಂದಿಗೆ ಮಾತನಾಡಿ ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು ಸೆಟ್‍ಲೈನ್ ಚಿತ್ರೀಕರಣದ ಆಧಾರದಲ್ಲಿ ಹಸಿರು ಇರುವುದನ್ನು ಕಾಡು ಎಂದು ಗುರುತಿಸಲಾಗಿದೆ ಎಂಬ ಆರೋಪ ಮಾಡಿದ್ದು ಅದರಲ್ಲಿ ಸತ್ಯವೂ ಇತ್ತು ಎಂದು ಸ್ಪಷ್ಠಪಡಿಸಿದರು.
  ಕಾಫಿ, ತೆಂಗು, ರಬ್ಬರ್, ಟೀ ತೋಟಗಳಲ್ಲಿ ಹಸಿರು ಇರುವುದನ್ನೇ ಕಾಡು ಎಂದು ವರದಿಯಲ್ಲಿ ಸಿದ್ದಪಡಿಸಲಾಗಿತ್ತು ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾ.ಪಂ ಮಟ್ಟದಲ್ಲಿ ಫಿಸಿಕಲಿ ಸರ್ವೆ ಮಾಡಬೇಕೆಂಬ ಬೇಡಿಕೆ ಇತ್ತು ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಹೇಳಿದರು.
  ಈವರೆಗೆ ಹಿಂದಿನ ಯಾವುದೇ ಸರ್ಕಾರ ಒಪ್ಪಿರಲಿಲ್ಲ ಪ್ರಧಾನಿ ನರೇಂದ್ರ ಮೋದಿಯವರ  ನೇತೃತ್ವದ ಸರ್ಕಾರ ಉಪೇಂದ್ರ ಯಾದವ್ ನೇತೃತ್ವದಲ್ಲಿ ಒಂದು ತೀರ್ಮಾನ ಮಾಡಿ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಈ ವರದಿ ಬಗ್ಗೆ ರೈತರು, ಕಾಫಿ ಬೆಳೆಗಾರರು, ಅಂಗಡಿ ಇಟ್ಟುಕೊಂಡಿದ್ದಾರೆ ಎಂಬ ಕುರಿತು ಮಾಹಿತಿ ಪಡೆಯಲು ಸಮಿತಿ ರಚಿಸಲಾಗಿದೆ ಎಂದರು.ಈ ಸಮಿತಿ ನೇತೃತ್ವದ ತಂಡ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಾಗೂ ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ ಕಸ್ತೂರಿ ರಂಗನ್  ವರದಿ ಬಗ್ಗೆ ಅಧ್ಯಯನ ಮಾಡಿ ಒಂದು ವರ್ಷದೊಳಗೆ ಸಂಕ್ಷಿಪ್ತ ವರದಿ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!