ವರುಣನ ಅಬ್ಬರಕ್ಕೆ ಕಾರಿನ ಮೇಲೆ ಬಿದ್ದ ಕಾಂಪೌಡ್
1 min readಚಿಕ್ಕಮಗಳೂರು : ಜಿಲ್ಲೆಯಲ್ಲಿ ಮುಂದುವರೆದ ವರುಣನ ಅಬ್ಬರಕ್ಕೆ ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣದ ಕಾಪೌಂಡ್ ಬಿದ್ದು ಎರಡು ಕಾರುಗಳ ಗೋಡೆ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಅಲ್ಲದೆ ಮನೆಯ ಮೇಲೆ ಬಿದ್ದು, ಬಾಕಿ ಉಳಿದಿದ್ದ ಕಾಂಪೌಂಡ್ ಗೋಡೆಯನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದರು.
ನಗರದ ಕೆ ಎಸ್ ಆರ್ ಟಿ ಸಿ ನಿಲ್ದಾಣದ ಕಾಂಪೌಂಡ್ಗೆ ಹೊಂದಿಕೊಡಂತೆ ಇರುವ ರಸ್ತೆಯಲ್ಲಿ ಕಾರು ಸೇರಿದಂತೆ ನಾಲ್ಕು ಚಕ್ರದ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ರಾತ್ರಿಯಿಡಿ ಸುರಿದ ಮಳೆಗೆ ಕಾಂಪೌಂಡ್ ಗೊಡೆ ಕುಸಿದು ಬಿದ್ದಿದ್ದು, ಇದರಿಂದ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದೆ. ಅಲ್ಲದೆ ಇದೇ ಭಾಗದಲ್ಲಿ ಮಳೆಗಾಲದಲ್ಲಿ ಅಪಾಯದ ಸೂಚನೆಯನ್ನು ನೀಡುತ್ತಿದ್ದ ಗ್ಯಾರೇಜ್ ಕಾಂಪೌಡ್ ಅನ್ನು ನಗರಸಭೆಯ ಜೆಸಿಬಿ ಯಂತ್ರ ಬಳಸಿ ತೆರವುಗೊಳಿಸಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g