ಅಭಿವೃದ್ಧಿ ಅನುದಾನವನ್ನು ತಡೆಹಿಡಿದು ಜಿಲ್ಲೆಯ ಅಭಿವೃದ್ಧಿಗೆ ತಡೆಯಾದ ಕಾಂಗ್ರೆಸ್ ಸರ್ಕಾರ
1 min readಚಿಕ್ಕಮಗಳೂರು : 2023 ರ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚಿಕ್ಕಮಗಳೂರು ಜಿಲ್ಲೆಗೆ ಒಂದೇ ಒಂದು ಮಂತ್ರಿ ಸ್ಥಾನ ನೀಡದೆ ಚಿಕ್ಕಮಗಳೂರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಹೆಚ್.ಸಿ.ಕಲ್ಮರುಡಪ್ಪನವರು ಹೇಳಿದರು.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ಬಿಜೆಪಿ ಪಕ್ಷ ಮಾತ್ರ ಈ ಜಿಲ್ಲೆಯ ಬಗ್ಗೆ ಅಪಾರವಾದ ಗೌರವ, ಪ್ರೀತಿ ಇಟ್ಟುಕೊಂಡಿರುವಂತಹ ಪಕ್ಷವಾಗಿದೆ. ಹಾಗಾಗಿ ಮತದಾರರು ಈ ಬಾರಿ ತಪ್ಪು ಮಾಡಿ ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿ ಅಧಿಕಾರ ನೀಡಿದ್ದಾರೆ ಎಂದು ಹೇಳಿದರು.
ಜಿಲ್ಲೆಗೆ ಮಂತ್ರಿ ಸ್ಥಾನ ಕೊಡದೇ ಇರುವುದು ಜಿಲ್ಲೆಯ ದೌರ್ಭಾಗ್ಯ ಎಂದರೇ ತಪ್ಪಾಗಲಾರದು. ಚಿಕ್ಕಮಗಳೂರು ಜಿಲ್ಲೆಗೆ ಬಿಜೆಪಿ ನೇತೃತ್ವದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿ ಚಿಕ್ಕಮಗಳೂರು ಜಿಲ್ಲೆಗೆ ಗೌರವವನ್ನು ತಂದುಕೊಡುತ್ತಿತ್ತು. ಆದರೆ ಇಂದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಒಂದು ಮಂತ್ರಿ ಸ್ಥಾನವನ್ನು ಕೊಡದೇ ಚಿಕ್ಕಮಗಳೂರು ಜಿಲ್ಲೆಯ ಘನತೆಯನ್ನು ಕಡಿಮೆ ಮಾಡಿದೆ. ಮತ್ತು ಅಭಿವೃದ್ಧಿಯ ಎಲ್ಲಾ ಕೆಲಸಗಳನ್ನು ಕೂಡ ತಡೆ ಹಿಡಿದಿದೆ. ಮೆಡಿಕಲ್ ಕಾಲೇಜು, ಬಯಲು ಸೀಮೆ ಭಾಗದ ನೀರಾವರಿ ಯೋಜನೆ, ಅಂಬೇಡ್ಕರ್ ಭವನ ನಿರ್ಮಾಣ, ವಿವಿಧ ಜಾತಿ ಸಮುದಾಯಗಳ ಭವನ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಜಲಜೀವನ್ ಮಿಷನ್ ಯೋಜನೆಯಡೀ ಮಂಜೂರು ಮಾಡಿರುವ ಹಣವನ್ನು ತಡೆಹಿಡಿದಿರುವುದು, ವಿವಿಧ ದೇವಾಲಯಗಳಿಗೆ ನೀಡಿರುವ ಅನುದಾನ ತಡೆಹಿಡಿಯಿಡಿಯುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಅಡ್ಡಗಾಲು ಹಾಕಿದ್ದಾರೆ. ಇದರಿಂದ ಕಾಂಗ್ರೆಸ್ ಸರ್ಕಾರವು ಪಕ್ಷವು ಜಿಲ್ಲೆಯ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಈ ತಕ್ಷಣವೇ ಕಾಂಗ್ರೆಸ್ ಸರ್ಕಾರ ಚಿಕ್ಕಮಗಳೂರು ಜಿಲ್ಲೆಗೆ ಗೌರವ ತರುವಂತಹ ಕೆಲಸವನ್ನು ಮತ್ತು ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಕೊಟ್ಟಿರುವಂತಹ ಕೊಡುಗೆಗಳನ್ನು ಮುಂದುವರೆಸಬೇಕೆಂದು ಆಗ್ರಹ ಮಾಡುತ್ತೇನೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g