ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರಿಗೆ ಮುಕ್ತ ಅವಕಾಶ ನೀಡಿದ ಜಿಲ್ಲಾಡಳಿತ
1 min readಭಾರೀ ಮಳೆಯಿಂದ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಚಿಕ್ಕಮಗಳೂರು ಜಿಲ್ಲಾಡಳಿತ ನಿರ್ಬಂಧವನ್ನ ಸಡಿಲಗೊಳಿಸಿದ್ದು ಮುಕ್ತ ಪ್ರವಾಸೋಧ್ಯಮಕ್ಕೆ ಅವಕಾಶ ನೀಡಿದೆ. ಕಳೆದ 15-20 ದಿನಗಳಿಂದ ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಪಶ್ಚಿಮ ಘಟ್ಟಗಳ ಸಾಲು ಮುಳ್ಳಯ್ಯನಗಿರಿಯ ಘಟ್ಟ ಪ್ರದೇಶದಲ್ಲೂ ಭಾರಿ ಮಳೆ ಸುರಿಯುತ್ತಿತ್ತು. ಭಾರಿ ಮಳೆಯಿಂದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮಾಣಿಕ್ಯದಾರ, ಗಾಳಿಕೆರೆ ಸೇರಿದಂತೆ ಗಿರಿ ಪ್ರದೇಶದ ಪ್ರವಾಸಿ ತಾಣಗಳಲ್ಲಿ ಭೂಕುಸಿತ ಉಂಟಾಗಿತ್ತು. ಗಿರಿ ಮಾರ್ಗದ ನಾಲ್ಕೈದು ಕಡೆಗಳಲ್ಲಿ ಅಲ್ಲಲ್ಲೇ ಭೂಕುಸಿತ ಉಂಟಾಗಿತ್ತು. ಹಾಗಾಗಿ, ಗಿರಿದಾದ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರದಿಂದ ಯಾವುದೇ ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಏರಿತ್ತು. ಇದೀಗ, ಕಳೆದ ನಾಲ್ಕೈದು ದಿನಗಳಿಂದ ಮಳೆಯ ಪ್ರಮಾಣ ಬಹುತೇಕ ತಗ್ಗಿದ್ದು ಭೂಕುಸಿತ ಉಂಟಾಗಿದ್ದ ಪ್ರದೇಶದಲ್ಲಿ ದುರಸ್ತಿ ಕಾರ್ಯ ಮುಗಿದಿರುವುದರಿಂದ ಜಿಲ್ಲಾಡಳಿತ ಪುನಃ ಪ್ರವಾಸೋದ್ಯಮಕ್ಕೆ ಮುಕ್ತ ಅವಕಾಶ ನೀಡಿದೆ. ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದ ಕಾರಣ ಜಿಲ್ಲಾಡಳಿತ ಪ್ರವಾಸಿಗರಿಗೆ ಪ್ರವಾಸವನ್ನ ಮುಂದೂಡುವಂತೆ ಮನವಿ ಕೂಡ ಮಾಡಿತ್ತು. ಕೆರೆ, ಹಳ್ಳ, ನದಿತೀರದ ಪ್ರದೇಶಗಳಿಗೆ ಯಾರೂ ಹೋಗಬಾರದೆಂದು ಸೂಚನೆಯನ್ನೂ ನೀಡಿತ್ತು. ಇದೀಗ ಜಿಲ್ಲಾಧ್ಯಂತ ಮಳೆ ಪ್ರಮಾಣ ಸಂಪೂರ್ಣ ಇಳಿಮುಖವಾಗಿತ್ತು ಪ್ರವಾಸೋದ್ಯಮಕ್ಕೆ ಮತ್ತೆ ಅವಕಾಶ ನೀಡಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g