ಮೂಡಿಗೆರೆ ಸ್ವಾಭಿಮಾನಿ ಬಣದ ಶಕ್ತಿ ಪ್ರದರ್ಶನಕ್ಕೆ ಮಣಿದ ಜಿಲ್ಲಾ ಬಿಜೆಪಿ
1 min readಮೂಡಿಗೆರೆ ಸ್ವಾಭಿಮಾನಿ ಬಣದ ಶಕ್ತಿ ಪ್ರದರ್ಶನಕ್ಕೆ ಜಿಲ್ಲಾ ಬಿಜೆಪಿ ಮಣಿದಿದೆ ತಕ್ಣದಿಂದಲೇ ಜಾರಿಗೆ ಬರುವಂತೆ ಇಬ್ಬರು ಮಹಾಶಕ್ತಿ ಕೇಂದ್ರ ಅಧ್ಯಕ್ಷರ ಅಮಾನತು ರದ್ದುಗೊಳಿಸಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆ ವೇಳೆ ಆಗಬಹುದಾಗಿದ್ದ ಅನಾಹುತಕ್ಕೆ ಬ್ರೇಕ್ ಬಿದ್ದಿದೆ.
ಬೀದಿ ಜಗಳ ಆಡಿಕೊಂಡಿದ್ದ ಮೂಡಿಗೆರೆ ಬಿಜೆಪಿ ಮುಖಂಡರ ಅಮಾನತು ಪ್ರಸಂಗ ಕೊನೆಗೂ ಸುಖಾಂತ್ಯ ಕಂಡಿದೆ. ಹೊಡೆದಾಟ ಮಾಡಿಕೊಂಡು ಪಕ್ಷದಿಂದ ಶಿಕ್ಷೆಗೆ ಗುರಿಯಾಗಿದ್ದ ಗೋಣಿಬೀಡು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಕನ್ನೆನಹಳ್ಳಿ ಭರತ್ ಬಣಕಲ್ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪುಟ್ಟಣ ಅಮಾನತು ರದ್ದುಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಲೋಕಸಭಾ ಚುನಾವಣೆ ವೇಳೆ ಭಾರಿ ಹೊಡೆತ ಕೊಡಬಹುದಾಗಿದ್ದ ಇಬ್ಬರು ಮುಖಂಡರ ಆಕ್ರೋಶ ಶಮನ ಮಾಡುವಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಯಶಸ್ವಿಯಾಗಿದ್ದಾರೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಆದೇಶವನ್ನು ರದ್ದುಗೊಳಿಸಿ ಕೂಡಲೇ ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ದೇವರಾಜ್ ಶೆಟ್ಟಿ ತಿಳಿಸಿದ್ದಾರೆ. ಇತ್ತೀಚೆಗೆ ಭರತ್ ಹಾಗೂ ಪುಟ್ಟಣ್ಣ ಬಿಜೆಪಿಯಲ್ಲೇ ಸ್ವಾಭಿಮಾನಿ ಬಣ ಮಾಡಿಕೊಂಡು ಶಕ್ತಿ ಪ್ರದರ್ಶನ ನಡೆಸಿ, ಮೂಡಿಗೆರೆ ಮಂಡಲ ಅಧ್ಯಕ್ಷರ ಪದಗ್ರಹಣವೇ ರದ್ದಾಗಿ ಪಕ್ಷಕ್ಕೆ ತೀವ್ರ ಮುಜುಗರ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g