ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು
1 min readಕೊಪ್ಪ: ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಹೊಂಡಕ್ಕೆ ಉರುಳಿ ಬಿದ್ದಿರೋ ಘಟನೆ ಜಿಲ್ಲೆ ಕೊಪ್ಪ ತಾಲೂಕಿನ ಲೋಕನಾಥಪುರ ಬಳಿ ನಡೆದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಲೋಕನಾಥಪುರ ಬಳಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಬಿದ್ದದೆ. ಪರಿಣಾಮ ಕಾರು ಜಖಂ ಗೊಂಡು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲುಮಾಡಲಾಗಿದೆ. ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಆಂಧ್ರ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಗಂಭೀರ ಗಾಯವಾಗಿರೋ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆ ಮನೆ ಬಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದೆ ಪರಿಣಾಮ ಕಾರಿನಲ್ಲಿ ಇದ್ದ ಇಬ್ಬರಿಗೆ ಗಂಭೀರವಾದ ಗಾಯವಾಗಿದ್ದು
ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಇಕ್ಬಾಲ್ , ದಿಲ್ಶಾದ್ ಬಾನು , ಅಬ್ ಸಿಯಾನ್, ಅಪ್ರ ಗಾಯಗೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ರವಾನೆ ಮಾಡಲಾಗಿದೆ. ಈ ಸಂಭಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g