ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು
1 min readಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಹೊಂಡಕ್ಕೆ ಉರುಳಿ ಬಿದ್ದಿರೋ ಘಟನೆ ಜಿಲ್ಲೆ ಕೊಪ್ಪ ತಾಲೂಕಿನ ಲೋಕನಾಥಪುರ ಬಳಿ ನಡೆದೆ.
ಕೊಪ್ಪ ತಾಲೂಕಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ವಾಹನ ಸವಾರರು ಪರದಾಡುವಂತೆ ಸ್ಥಿತಿ ನಿರ್ಮಾಣವಾಗಿದೆ.ಜಿಲ್ಲೆ ಕೊಪ್ಪ ತಾಲೂಕಿನ ಲೋಕನಾಥಪುರ ಬಳಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಬಿದ್ದದೆ.. ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲುಮಾಡಲಾಗಿದೆ. ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಆಂಧ್ರ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g