May 9, 2024

MALNAD TV

HEART OF COFFEE CITY

ಕೈ ಕೊಯ್ದುಕೊಂಡ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು

1 min read

ಕಾವೇರಿ ನೀರಿಗಾಗಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕನ್ನಡ ಪರ ಹೋರಾಟಗಾರರು ಕೈ ಕೊಯ್ದುಕೊಂಡು ರಕ್ತ ಕೊಡುತ್ತೇವೆ ನೀರು ಕೊಡುವುದಿಲ್ಲ ಎಂದು ಆಕ್ರೋಶ ಅವರ ಹಾಕಿರುವ ಘಟನೆ ಜಿಲ್ಲೆಯ ಕಳಸ ಪಟ್ಟಣದಲ್ಲಿ ನಡೆದಿದೆ. ಕನ್ನಡಪರ ಸಂಘಟನೆ ಕಾರ್ಯಕರ್ತ ಹಾಗೂ ಕನ್ನಡ ರಾಜು ಎಂದೇ ಖ್ಯಾತಿಯಾಗಿರುವ ಕಳಸದ ಆಟೋ ಚಾಲಕ ಹಾಗೂ ಕನ್ನಡಪರ ಹೋರಾಟಗಾರ ರಾಜು ಪ್ರತಿಭಟನೆ ವೇಳೆ ಏಕಾಏಕಿ ಕೈ ಕೊಯ್ದುಕೊಂಡಿದ್ದಾರೆ. ಕಳಸ ಪಟ್ಟಣದಲ್ಲೂ ಕೂಡ ರೈತ ಸಂಘ ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ವೇಳೆ ರೈತರಿಗೆ ಅನುಕೂಲವಾಗಬೇಕು, ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸಬೇಕು ಎಂದು ಕನ್ನಡ ರಾಜು ಕೈಯನ್ನ ಕೊಯ್ದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆ ವೇಳೆ ಜೊತೆಗಿದ್ದ ರೈತ ಸಂಘ ಹಾಗೂ ಇತರೆ ಹೋರಾಟಗಾರರು ರಾಜುರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಲು ಮುಂದಾದರು. ಈ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಪ್ರತಿಕೃತಿ ಎಳೆದಾಡುವ ಸನ್ನಿವೇಶ ನಿರ್ಮಾಣವಾಗಿತ್ತು. ಪೊಲೀಸರು ಪ್ರತಿಕೃತಿ ದಹಿಸುವುದು ಬೇಡ ಎಂದು. ಆದರೆ, ಬಿಜೆಪಿ ಕಾರ್ಯಕರ್ತರು ಸಿದ್ದು ಹಾಗೂ ಡಿಕೆಶಿ ಪ್ರತಿಕೃತಿ ದಹಿಸಬೇಕು ಎಂದು ಬಿಜೆಪಿ ಕಚೇರಿ ಮುಂದೆ ಪ್ರತಿಕೃತಿ ಎಳೆದಾಡುವ ದೃಶ್ಯವೂ ನಡೆಯಿತು. ಅಂತಿಮವಾಗಿ, ಬಿಜೆಪಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!