May 8, 2024

MALNAD TV

HEART OF COFFEE CITY

ಕುಟುಂಬ ಸಮೇತ ಶಾರದಾಂಬೆ ದರ್ಶನ ಪಡೆದ ರಾಜ್ಯಪಾಲರ ಕುಟುಂಬ

1 min read

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪತ್ನಿ, ಮಕ್ಕಳು ಹಾಗೂ ಮೊಮ್ಮಕ್ಕಳ ಜೊತೆ ಕುಟುಂಬ ಸಮೇತರಾಗಿ ಹೊರನಾಡು ಅನ್ನಪೂರ್ಣೇಶ್ವರಿ ಹಾಗೂ ಶೃಂಗೇರಿ ಶಾರದಾಂಭೆ ದರ್ಶನ ಪಡೆದಿದ್ದಾರೆ. ಬುಧುವಾರ ಧರ್ಮಸ್ಥಳ ಮಂಜುನಾಥ್ ಸ್ವಾಮಿ ದರ್ಶನ ಪಡೆದು ಸಂಜೆ ಕುದುರೆಮುಖಕ್ಕೆ ಆಗಮಿಸಿ ಅಲ್ಲಿನ ಲಕ್ಯಾ ಡ್ಯಾಂನ ಹಿನ್ನೀರು ಪ್ರದೇಶವನ್ನ ವೀಕ್ಷಿಸಿದ ಬಳಿಕ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಭದ್ರಾ ನೇಚರ್ ಕ್ಯಾಂಪ್‍ನ ಜಂಗಲ್ ಲಾಡ್ಜ್‍ನಲ್ಲಿ ತಂಗಿದ್ದರು. ರಾಜ್ಯಪಾಲರ ಭೇಟಿ ನೀಡುವ ಹಿನ್ನಲೆ ಕುದುರೆಮುಖದಿಂದ ಹೊರನಾಡುವರೆಗೆ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿತ್ತು. ರಾಜ್ಯಪಾಲರು ಹೊರನಾಡಿಗೆ ಬಂದು ಹೋಗುವವರೆಗೆ ಇತರೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿತ್ತು. ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ಅನ್ನಪೂರ್ಣೇಶ್ವರಿ ಅಮ್ಮನವರ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರಿಗೆ ಸ್ವಾಗತ ಕೋರಲಾಯಿತು. ಗೌರವಾನ್ವಿತ ರಾಜ್ಯಪಾಲರು ಮತ್ತು ಪತ್ನಿ ಅನಿತಾ ಗೆಹ್ಲೋಟ್ ಅವರು ಶ್ರೀ ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಧರ್ಮಕರ್ತರಾದ ಡಾ. ಭೀಮೇಶ್ವರ ಜೋಷಿಯವರನ್ನು ಸೌಹಾರ್ಧಯುತವಾಗಿ ಭೇಟಿ ಮಾಡಿದರು. ನಂತರ ಶೃಂಗೇರಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ಶೃಂಗೇರಿ ಶಾರದಾಂಬೆ ಹಾಗೂ ಶ್ರೀ ವಿದ್ಯಾಶಂಕರ ಸ್ವಾಮಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರಿಗೆ ವಿಶೇಷವಾಗಿ ಸ್ವಾಗತ ಕೋರಲಾಯಿತು. ಶೃಂಗೇರಿ ಶಾರದಾ ಪೀಠದ ಶ್ರೀ ವಿದುಶೇಖರ ಭಾರತಿ ಶ್ರೀಗಳನ್ನು ಭೇಟಿ ಮಾಡಿ ರಾಜ್ಯಪಾಲರ ಕುಟುಂಬ ಆಶೀರ್ವಾದ ಪಡೆದರು. ದೇವಸ್ಥಾನದ ಆಡಳಿತ ಮಂಡಳಿಯಿಂದ ರಾಜ್ಯಪಾಲರನ್ನು ಸನ್ಮಾನಿಸಲಾಯಿತು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!