ನಾಳೆ ನಡೆಯಲಿದೆ ನಗರಸಭೆ ಮಂಜೂರಾತಿ ತಡೆಯಾಜ್ಞೆ ಅರ್ಜಿ ವಿಚಾರಣೆ
1 min readನಗರಸಭೆ ಸಾಮಾನ್ಯಸಭೆ ಅನುಮೋದನೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ಜಿಲ್ಲಾಧಿಕಾರಿ ಕೋರ್ಟ್ ನಲ್ಲಿ ನಾಳೆ ವಿಚಾರಣೆಗೆ ಬರಲಿದೆ. ಈ ನಡುವೆ ನಿಮ್ಮ ತೆವಲಿಗೆ ತಡೆಯಾಜ್ಞೆ ಏಕೆ ಕೊಡಬೇಕೆ ಎಂದು ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಚಾಟಿ ಬೀಸಿದ್ದಾರೆ.
ಕಳೆದ ಡಿಸೆಂಬರ್ 20ರಲ್ಲಿ ನಡೆದಿದ್ದ ನಗರಸಭೆ ಸಾಮಾನ್ಯಸಭೆಯ ಬಿಲ್ ಗಳ ಅನುಮೋದನೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ನಾಳೆ ವಿಚಾರಣೆಗೆ ಬರಲಿದೆ. ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಜೆಡಿಎಸ್ ನಗರಸಭೆ ಸದಸ್ಯ ಎ.ಸಿ ಕುಮಾರ್ ಯಾವುದೇ ಬಿಲ್ ಪಾಸ್ ಮಾಡದಂತೆ ತಡೆಯಾಜ್ಞೆ ನೀಡುವಂತೆ ವಕೀಲ ದಯಾನಂದ್ ಮೂಲಕ ಅರ್ಜಿ ಸಲ್ಲಿಸಿದರು. ನಾಳೆ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಇದರ ವಿಚಾರಣೆಯನ್ನು ಜಿಲ್ಲಾಧಿಕಾರಿ ಸಿ.ಎನ್ ಮೀನಾ ನಾಗರಾಜ್ ಕೈಗೆತ್ತಿಕೊಳ್ಳಲಿದ್ದಾರೆ. ಚಿಕ್ಕಮಗಳೂರು ನಗರದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ಕಾರಣಕ್ಕೂ ಸಾಮಾನ್ಯ ಸಭೆಯಲ್ಲಿ ಪಾಸ್ ಮಾಡಿರುವ ವಿಷಯಗಳಿಗೆ ಅನುಮೋದನೆ ನೀಡಬಾರದು ಎಂದು ಜಿಲ್ಲಾಧಿಕಾರಿ ಕೋರ್ಟ್ ನಲ್ಲಿ ತಡೆಯಾಜ್ಞೆಗೆ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿದೆ. ನಾಳಿನ ವಿಚಾರಣೆಯಲ್ಲಿ ಜೆಡಿಎಸ್ ಸದಸ್ಯ ಎ.ಸಿ ಕುಮಾರ್ ಸಹಾ ಹಾಜರಿದ್ದು ತಮ್ಮ ಕೋರಿಕೆ ಸಲ್ಲಿಸಲಿದ್ದಾರೆ. ಆದರೆ ಈ ವಿಚಾರದ ಬಗ್ಗೆ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ತೆವಲಿಗೆ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಲು ತಡೆಯಾಜ್ಞೆ ಏಕೆ ಕೋರಿದ್ದೀರಾ ಎಂದು ಬಿಜೆಪಿ ಜೆಡಿಎಸ್ ಸದಸ್ಯರಿಗೆ ಪ್ರಶ್ನೆ ಮಾಡಿದ್ದಾರೆ. ನಗರದ ಅಭಿವೃದ್ಧಿ ಅವರಿಗೆ ಇಷ್ಟವಿಲ್ಲ , ಏಕೆ ನಿಮ್ಮನ್ನು ಆಯ್ಕೆ ಮಾಡಿದ್ದಾರೆ. ನಗರ ಅಭಿವೃದ್ಧಿ ಆಗುವುದು ನಿಮಗೆ ಇಷ್ಟವಿಲ್ಲವೇ, ಬಹುಮತದೊಂದಿಗೆ ನಾವು ಅನುಮೋದನೆ ಪಡೆದುಕೊಂಡಿದ್ದೇವೆ. ನಗರದ ಜನರಲ್ಲಿ ನಮ್ಮ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡುತ್ತಿದ್ದಾರೆ. ನಮ್ಮ ಕೆಲಸ ನಾವು ಮಾಡಿಕೊಂಡು ಹೋಗುತ್ತವೆ ಎಂದು ವರಸಿದ್ದಿ ವೇಣುಗೋಪಾಲ್ ಹೇಳಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g