May 9, 2024

MALNAD TV

HEART OF COFFEE CITY

ಪೊಲೀಸರ ವಿರೋಧದ ಮಧ್ಯೆಯೂ ಪಟಾಕಿ ಸಿಡಿಸಿ, ಸಂಭ್ರಮಿಸಿದ ಹಿಂದೂ ಕಾರ್ಯಕರ್ತರು

1 min read

ಹಿಂದೂಮಹಾಸಭಾ ಗಣಪತಿ ವಿಸರ್ಜನೆ ವೇಳೆ ಪಟಾಕಿ ಸಿಡಿಸುವ ವಿಚಾರವಾಗಿ ಹಿಂದೂಸಂಘಟನೆಗಳ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದು, ವಿರೋಧದ ಮಧ್ಯೆಯೂ ಹಿಂದೂ ಸಂಘಟನೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದಲ್ಲಿ ಇಂದು ಹಿಂದೂಮಹಾಸಭಾ ಗಣಪತಿ ವಿಸರ್ಜನೆ ಅಂಗವಾಗಿ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿತ್ತು. ಗಣಪತಿಯ ಮೆರವಣಿಗೆ ವೇಳೆ ಕೆಲ ನಿರ್ದಿಷ್ಟ ಪ್ರದೇಶದಲ್ಲಿ ಪಟಾಕಿ ಸಿಡಿಸಲು ಪೊಲೀಸರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ, ನಾವು ಇಲ್ಲಿ ಪಟಾಕಿ ಸಿಡಿಸಲೇಬೇಕು ಎಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ಪಟಾಕಿ ಸಿಡಿಸಲು ಮುಂದಾದರು. ಈ ವೇಳೆ, ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಕೂಡ ನಡೆಯಿತು. ಈ ವೇಳೆ, ಒಂದು ಗುಂಪು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸುತ್ತಿದ್ದರೆ ಮತ್ತೊಂದು ಗುಂಪು ಅದೇ ಜಾಗದಲ್ಲಿ ಏಕಾಏಕಿ ಪಟಾಕಿ ಹಚ್ಚಿದ್ದರು. ಪಟಾಕಿ ಸಿಡಿಯುತ್ತಿದ್ದಂತೆ ಎಲ್ಲರೂ ಅಲ್ಲಿಂದ ಚದುರಿದರು. ಪೊಲೀಸರು ವಿರೋಧ ವ್ಯಕ್ತಪಡಿಸಿದ ಜಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಹಿಂದೂಪರ ಸಂಘಟನೆ ಕಾರ್ಯರ್ಕರು ಬಳಿಕ ಮೆರವಣಿಗೆಯನ್ನ ಮುಂದಕ್ಕೆ ಕೊಂಡೊಯ್ದಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!